Webdunia - Bharat's app for daily news and videos

Install App

ಸೋನಿಯಾ ಗಾಂಧಿಯನ್ನು ‘ವಿದೇಶಿ’ ಎಂದಿದ್ದಕ್ಕೆ ತನ್ನ ಪಕ್ಷದ ನಾಯಕನಿಗೆ ಮಾಯಾವತಿ ನೀಡಿದ ಶಿಕ್ಷೆಯೇನು ಗೊತ್ತಾ?!

Webdunia
ಬುಧವಾರ, 18 ಜುಲೈ 2018 (09:41 IST)
ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಒಂದಾಗಿ ಬಿಜೆಪಿ ವಿರುದ್ಧ ಹೋರಾಡಲು ಮುಂದಾಗಿರುವ ಮಾಯಾವತಿ ತಮ್ಮ ರಾಜಕೀಯ ಸ್ನೇಹಿತೆ ಸೋನಿಯಾ ಗಾಂಧಿ ವಿರುದ್ಧ ತಪ್ಪಾಗಿ ಮಾತನಾಡಿದ್ದಕ್ಕೆ ತಮ್ಮ ಪಕ್ಷದ ನಾಯಕನಿಗೆ ತಕ್ಕ ಶಾಸ್ತಿ ಮಾಡಿದ್ದಾರೆ.

‘ರಾಹುಲ್ ಗಾಂಧಿ ತಮ್ಮ ತಂದೆಗಿಂತ ತಾಯಿ ಸೋನಿಯಾರನ್ನೇ ಹೆಚ್ಚು ಹೋಲುತ್ತಾರೆ. ಸೋನಿಯಾ ವಿದೇಶಿ. ಹಾಗಾಗಿ ರಾಹುಲ್ ಪ್ರಧಾನಿಯಾಗಲು ಸಾಧ್ಯವಿಲ್ಲ’ ಎಂದು ಮಾಯಾವತಿ ಅವರ ಬಿಎಸ್ ಪಿ ಪಕ್ಷದ ರಾಷ್ಟ್ರೀಯ ಸಂಯೋಜಕ ಜೈ ಪ್ರಕಾಶ್ ಸಿಂಗ್ ಹೇಳಿಕೆ ನೀಡಿದ್ದರು.

ಜೈ ಪ್ರಕಾಶ್ ಸಿಂಗ್ ವಿವಾದಿತ ಹೇಳಿಕೆಗೆ ಕ್ರುದ್ಧರಾಗಿರುವ ಮಾಯಾವತಿ ಅವರನ್ನು ಹುದ್ದೆಯಿಂದ ವಜಾಗೊಳಿಸಿದ್ದಾರೆ.  ಬಿಎಸ್ ಪಿ ಪಕ್ಷದ ಹಿತಾಸಕ್ತಿಗೆ ವಿರುದ್ಧವಾಗಿ ಹೇಳಿಕೆ ನೀಡಿದ್ದಕ್ಕೆ ಈ ಶಿಕ್ಷೆ ನೀಡಲಾಗಿದೆ ಎಂದು ಮಾಯಾವತಿ ಹೇಳಿದ್ದಾರೆ. ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಜತೆಗೂಡಿ ಮೈತ್ರಿಗೆ ಮುಂದಾಗಿರುವ ಬೆನ್ನಲ್ಲೇ ತಮ್ಮ ಪಕ್ಷದ ನಾಯಕನ ಹೇಳಿಕೆ ಮಾಯಾವತಿ ಸಿಟ್ಟಿಗೆ ಕಾರಣವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments