Webdunia - Bharat's app for daily news and videos

Install App

ಸ್ನೇಹಿತನ ಭಾವಿ ಪತ್ನಿ ಫೋಟೋ ಕದ್ದು ಬ್ಲ್ಯಾಕ್‌ಮೇಲ್: ಎಮ್‌ಬಿಎ ವಿದ್ಯಾರ್ಥಿ ಬಂಧನ

Webdunia
ಶುಕ್ರವಾರ, 24 ಜೂನ್ 2016 (12:00 IST)
ತನ್ನ ಸ್ನೇಹಿತನ ಭಾವಿ ಪತ್ನಿಗೆ ಬೆದರಿಕೆ ಹಾಕುತ್ತಿದ್ದ ಆರೋಪದ ಮೇಲೆ ಮುಂಬೈ ಪೊಲೀಸರು ಉದ್ಯಮಪತಿಯೊಬ್ಬರ ಮಗ, ಎಮ್‌ಬಿಎ ವಿದ್ಯಾರ್ಥಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. 

ಬಾಂದ್ರಾಕುರ್ಲಾ ಕಾಂಪ್ಲೆಕ್ಸ್‌ನಲ್ಲಿ ಆರೋಪಿ ವಿಕಾಸ್ ಅಗ್ರವಾಲ್‌ನನ್ನು ವಶಕ್ಕೆ ಪಡೆದಿರುವ ರಬೋಡಿ ಪೊಲೀಸರು ವಿಚಾರಣೆಯನ್ನು ಕೈಗೊಂಡಿದ್ದಾರೆ.
 
ಚಾರ್ಟೆಂಡ್ ಅಕೌಂಟೆಂಟ್ ಆಗಿರುವ 23 ವರ್ಷದ ಪೀಡಿತೆ ತನ್ನ ಭಾವಿ ಪತಿ ಮೊಬೈಲ್‌ಗೆ ಕಳುಹಿಸಿದ್ದ ಖಾಸಗಿ ಫೋಟೋಗಳನ್ನು ಆರೋಪಿ ವಿಕಾಸ್ ವಂಚನೆಯಿಂದ ತನ್ನ ಮೊಬೈಲ್‌ಗೆ ವರ್ಗಾಯಿಸಿಕೊಂಡಿದ್ದ ಮತ್ತು ಆಕೆಗೆ 5 ಲಕ್ಷ ರೂಪಾಯಿ ನೀಡುವಂತೆ ಬೆದರಿಕೆ ಹಾಕಿದ್ದ. ಆ ಮೂಲಕ ತಾನು ಮಾಡಿಕೊಂಡಿದ್ದ ಸಾಲಗಳನ್ನು ತೀರಿಸುವುದು ಅವನ ದುರುದ್ದೇಶವಾಗಿತ್ತು. 
 
ಕಳೆದ 6 ದಿನಗಳ ಹಿಂದೆ ಯುವತಿಯ ಆಫೀಸಿಗೆ ಒಂದು ಪಾರ್ಸಲ್ ಬಂದಿತ್ತು. ಅದರಲ್ಲಿದ್ದ ಪೆನ್ ಡ್ರೈವ್‌ನಲ್ಲಿ ಆಕೆಯ ಸೆಲ್ಫಿ ಫೋಟೋಗಳಿದ್ದವು. ಸ್ವಲ್ಪ ಸಮಯದ ಬಳಿಕ ಸಾರ್ವಜನಿಕ ದೂರವಾಣಿಯಿಂದ ಕರೆ ಮಾಡಿದ ವ್ಯಕ್ತಿ ನೀನು ನನಗೆ 5 ಲಕ್ಷ ರೂಪಾಯಿ ನೀಡದಿದ್ದರೆ ಈ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಡುವುದಾಗಿ ಬೆದರಿಸಿದ್ದಾನೆ.
 
ತಾನು ಮೊಬೈಲ್ ರಿಪೇರಿಗೆ ನೀಡಿದ್ದ ಅಂಗಡಿಯಲ್ಲಿ ಈ ಫೋಟೋಗಳನ್ನು ಕದಿಯಲಾಯಿತು ಎಂದು ಯುವತಿ ಭಾವಿಸಿದಳು. ಆದರೆ ಅವರದೇನು ತಪ್ಪಿಲ್ಲ ಎಂಬುದು ಬಳಿಕ ಆಕೆಯ ಅರಿವಿಗೆ ಬಂತು. ಪೊಲೀಸರಿಗೆ ದೂರು ನೀಡಲಾಗಿ ಅವರು ಆಕೆಯ ಬಳಿ ಈ ಫೋಟೋಗಳನ್ನು ಯಾರಿಗಾದರೂ ಕಳುಹಿಸಿದ್ದೀಯಾ ಎಂದು ಕೇಳಿದಾಗ ತನ್ನ ಭಾವಿ ಪತಿಗೆ ಎಂದು ಉತ್ತರಿಸಿದ್ದಾಳೆ. ಆಕೆಯ ಬಾವಿ ಪತಿ ಮತ್ತು ಆತನ ಸ್ನೇಹಿತರ ಮೇಲೆ ಸಂಶಯಗೊಂಡ ಪೊಲೀಸರು, ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ವ್ಯಕ್ತಿ ಹೇಳಿದ ಸ್ಥಳಕ್ಕೆ ಆಕೆಯನ್ನು ಕಳುಹಿಸಿ ಹಣವನ್ನು ಪಡೆಯಲು ಆಗಮಿಸಿದ ಆರೋಪಿಯನ್ನು ಬಂಧಿಸಿದ್ದಾರೆ. 
 
ತಾನು ಆಕೆಯ ಭಾವಿ ಪತಿಯ ಬಾಲ್ಯ ಸ್ನೇಹಿತನಾಗಿದ್ದು ಆತನ ಜತೆ ಥೈಲ್ಯಾಂಡ್ ಪ್ರವಾಸಕ್ಕೆ ಹೋದಾಗ ಫೋಟೋಗಳನ್ನು ಕದ್ದಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ. ತಾನು 10-15 ಲಕ್ಷ ಸಾಲ ಮಾಡಿಕೊಂಡಿದ್ದು ಅದನ್ನು ತೀರಿಸಲು ಈ ಕೃತ್ಯಕ್ಕೆ ಕೈ ಹಾಕಿರುವುದಾಗಿ ಆತ ಹೇಳಿದ್ದಾನೆ.


ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂದೇಶ್‌ಖಾಲಿ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಸಿಬಿಐ: ಟಿಎಂಸಿ ಮುಖಂಡ ಶಹಜಹಾನ್‌ ಶೇಖ್‌ಗೆ ಶಾಕ್‌

ಕೌಟುಂಬಿಕ ಕಲಹದಿಂದ ಬೇಸತ್ತು ಲಾಡ್ಜ್‌ನಲ್ಲೇ ಸಾವಿಗೆ ಶರಣಾದ ದಾವಣಗೆರೆಯ ಸಬ್‌ ಇನ್‌ಸ್ಪೆಕ್ಟರ್‌

ಸಿಎಂ ಬದಲಾವಣೆ ಕೂಗಿನ ಬೆನ್ನಲ್ಲೇ ಸಿದ್ದರಾಮಯ್ಯಗೆ ಎಐಸಿಸಿಯಲ್ಲಿ ಹೊಸ ಜವಾಬ್ದಾರಿ: ಏನಿದು ಲೆಕ್ಕಾಚಾರ

ಅಜ್ಞಾತ ವಾಸದಿಂದ ಹೊರಬಂದ ಇರಾನ್‌ನ ಸರ್ವೋಚ್ಚ ನಾಯಕ: ಜನರತ್ತ ಕೈಬೀಸಿದ ಅಯಾತೊಲ್ಲಾ ಅಲಿ

ಟೆಕ್ಸಾಸ್‌ನಲ್ಲಿ ಹಠಾತ್ ಪ್ರವಾಹದಿಂದ 50 ಮಂದಿ ಸಾವು: 850 ಮಂದಿಯ ರಕ್ಷಣೆ, 27 ವಿದ್ಯಾರ್ಥಿನಿಯರು ನಾಪತ್ತೆ

ಮುಂದಿನ ಸುದ್ದಿ
Show comments