Select Your Language

Notifications

webdunia
webdunia
webdunia
webdunia

ಮೆಕ್ಕಾ ಯಾತ್ರಿಕರ ಬಸ್ ದುರಂತ: ಪರಿಹಾರ ಘೋಷಿಸಿದ ತೆಲಂಗಾಣ ಸರ್ಕಾರ

Revanth Reddy

Sampriya

ಹೈದರಾಬಾದ್ , ಸೋಮವಾರ, 17 ನವೆಂಬರ್ 2025 (18:55 IST)
Photo Credit X
ಹೈದರಾಬಾದ್ (ತೆಲಂಗಾಣ): ಸೌದಿ ಅರೇಬಿಯಾದಲ್ಲಿ ಬಸ್ ಅಪಘಾತದಲ್ಲಿ ಸಾವನ್ನಪ್ಪಿದ 45 ಜನರ ಕುಟುಂಬಗಳಿಗೆ ತೆಲಂಗಾಣ ಸರ್ಕಾರ ತಲಾ 5 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದೆ. 

ತೆಲಂಗಾಣ ಸಿಎಂಒ ಪ್ರಕಾರ, ರಾಜ್ಯ ಸಚಿವ ಸಂಪುಟವು ಸೋಮವಾರ ಸೆಕ್ರೆಟರಿಯೇಟ್‌ನಲ್ಲಿ ನಡೆದ ಸಭೆಯಲ್ಲಿ ಮೃತ ಕುಟುಂಬಗಳಿಗೆ ಪರಿಹಾರ ನೀಡಲು ಘೋಷಿಸಿತು. 

ರಾಜ್ಯ ಸರ್ಕಾರವು ರಾಜ್ಯ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಮೊಹಮ್ಮದ್ ಅಜರುದ್ದೀನ್ ನೇತೃತ್ವದ ಸರ್ಕಾರಿ ತಂಡವನ್ನು ಸೌದಿ ಅರೇಬಿಯಾಕ್ಕೆ ನಿಯೋಜಿಸಲು ನಿರ್ಧರಿಸಿದೆ. 

ಎಐಎಂಐಎಂ ಶಾಸಕರೊಬ್ಬರು ಮತ್ತು ಅಲ್ಪಸಂಖ್ಯಾತ ಸಮುದಾಯದ ಹಿರಿಯ ಅಧಿಕಾರಿಯೂ ತಂಡದ ಭಾಗವಾಗಲಿದ್ದಾರೆ. ಪ್ರತಿ ಬಲಿಪಶುವಿನ ಕುಟುಂಬದ ಇಬ್ಬರನ್ನು ಸಹ ಸೌದಿ ಅರೇಬಿಯಾಕ್ಕೆ ಕರೆದೊಯ್ಯಲಾಗುತ್ತದೆ. ಮೃತರ ಪಾರ್ಥಿವ ಶರೀರದ ಅಂತಿಮ ಸಂಸ್ಕಾರವನ್ನು ಸೌದಿ ದೇಶದಲ್ಲಿ ನಡೆಸಲಾಗುವುದು ಎಂದು ತೆಲಂಗಾಣ ಸಿಎಂಒ ತಿಳಿಸಿದೆ. 

ಸೌದಿ ಅರೇಬಿಯಾದ ಮದೀನಾ ಬಳಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಹೈದರಾಬಾದ್ ಮತ್ತು ತೆಲಂಗಾಣದ ಇತರ ಭಾಗಗಳಿಂದ ಕನಿಷ್ಠ 45 ಭಾರತೀಯ ಉಮ್ರಾ ಯಾತ್ರಿಕರು ಸಾವನ್ನಪ್ಪಿದರು.

ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಸಜ್ಜನರ್, ಗುಂಪು ಮಕ್ಕಾದಿಂದ ಮದೀನಾಕ್ಕೆ ಪ್ರಯಾಣಿಸುತ್ತಿದ್ದಾಗ, ಮದೀನಾಕ್ಕೆ ಸುಮಾರು 25 ಕಿಮೀ ಮೊದಲು ಅವರ ಬಸ್ ತೈಲ ಟ್ಯಾಂಕರ್‌ಗೆ ಡಿಕ್ಕಿ ಹೊಡೆದು ನಿಮಿಷಗಳಲ್ಲಿ ವಾಹನವನ್ನು ಆವರಿಸಿತು. ದುರ್ಘಟನೆಯಲ್ಲಿ 45 ಭಾರತೀಯ ಉಮ್ರಾ ಯಾತ್ರಿಕರು ಸಾವನ್ನಪ್ಪಿದರು.

Share this Story:

Follow Webdunia kannada

ಮುಂದಿನ ಸುದ್ದಿ

6 ವರ್ಷಗಳ ಬಳಿಕ ಭಾರತ, ಚೀನಾ ನಡುವೆ ಏರ್ ಇಂಡಿಯಾ ಹಾರಾಟ ಪುನರಾರಂಭ