Webdunia - Bharat's app for daily news and videos

Install App

ಚಂದ್ರಬಾಬು ನಾಯ್ಡು ಪ್ರಮಾಣ ವಚನಕ್ಕೆ ಮೆಗಾಸ್ಟಾರ್ ಚಿರಂಜೀವಿ ಫ್ಯಾಮಿಲಿ ಗೆಸ್ಟ್

Krishnaveni K
ಬುಧವಾರ, 12 ಜೂನ್ 2024 (09:48 IST)
ಅಮರಾವತಿ: ಆಂಧ್ರಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಇಂದು ಚಂದ್ರಬಾಬು ನಾಯ್ಡು ಅಧಿಕಾರ ಸ್ವಿಕರಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಮೆಗಾಸ್ಟಾರ್ ಚಿರಂಜೀವಿ ಕುಟುಂಬ ಸಮೇತರಾಗಿ ಹಾಜರಾಗಲಿದ್ದಾರೆ.

ಇತ್ತೀಚೆಗೆ ನಡೆದಿದ್ದ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಟಿಡಿಪಿ ಮತ್ತು ಪವನ್ ಕಲ್ಯಾಣ್ ನೇತೃತ್ವದ ಜನಸೇನಾ ಪಕ್ಷ ಅಭೂತಪೂರ್ವ ಗೆಲುವು ಸಾಧಿಸಿತ್ತು. ಇಂದು ಚಂದ್ರಬಾಬು ನಾಯ್ಡು ಮುಖ್ಯಮಂತ್ರಿಯಾಗಿ ಪ್ರಮಾಣ ಮಾಡಲಿದ್ದಾರೆ. ಅವರ ಜೊತೆಗೆ ಪವನ್ ಕಲ್ಯಾಣ್ ಕೂಡಾ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದೀಗ ಆಂಧ್ರದಲ್ಲಿ ಚಂದ್ರಬಾಬು-ಪವನ್ ಕಲ್ಯಾಣ್ ಜುಗಲ್ ಬಂದಿ ನಡೆಯಲಿದೆ.

ವಿಜಯವಾಡದಲ್ಲಿ ನಡೆಯಲಿರುವ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗಿಯಾಗಲು ಮೆಗಾಸ್ಟಾರ್ ಚಿರಂಜೀವಿ ಪತ್ನಿ ಸಮೇತರಾಗಿ ನಿನ್ನೆಯೇ ಆಗಮಿಸಿದ್ದಾರೆ. ಮೊನ್ನೆಯಷ್ಟೇ ಚುನಾವಣೆ ಗೆಲುವಿನ ಬೆನ್ನಲ್ಲೇ ಪವನ್ ಕಲ್ಯಾಣ್ ಅಣ್ಣ ಚಿರಂಜೀವಿ ಮನೆಗೆ ತೆರಳಿ ಆಶೀರ್ವಾದ ಪಡೆದಿದ್ದರು.

ಇದೀಗ ಚಿರಂಜೀವಿ, ಪತ್ನಿ, ಹಾಗೂ ಪುತ್ರ, ನಟ ರಾಮ್ ಚರಣ್ ಕೂಡಾ ಇಂದಿನ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗಿಯಾಗುವ ನಿರೀಕ್ಷೆಯಿದೆ. ತಮ್ಮ ಪವನ್ ಇದೇ ಮೊದಲ ಬಾರಿಗೆ ಸಚಿವನಾಗಿ ಪ್ರಮಾಣ ವಚನ ಸ್ವೀಕರಿಸುವುದನ್ನು ಚಿರಂಜೀವಿ ನೋಡಿ ಕಣ್ತುಂಬಿಕೊಳ್ಳಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments