Webdunia - Bharat's app for daily news and videos

Install App

ಮೇಘಾಲಯ ಹನಿಮೂನ್ ಮರ್ಡರ್ ಕೇಸ್, ಮಹತ್ವದ ಬದಲಾವಣೆ

ಸಂಪ್ರಿಯ
ಗುರುವಾರ, 30 ಜುಲೈ 2026 (15:36 IST)
Photo Credit X
ಶಿಲ್ಲಾಂಗ್: ಮೇಘಾಲಯದಲ್ಲಿ ಮೇ 2025ರಲ್ಲಿ (ಹನಿಮೂನ್) ಸಮಯದಲ್ಲಿ ಪತಿ ರಾಜಾ ರಘುವಂಶಿ ಅವರನ್ನು ಹತ್ಯೆ ಮಾಡಿದ ಆರೋಪ ಹೊತ್ತಿರುವ ಸೋನಮ್ ರಘುವಂಶಿ, ಬುಧವಾರ ಶಿಲ್ಲಾಂಗ್‌ನ ಸೆಷನ್ಸ್ ನ್ಯಾಯಾಲಯಕ್ಕೆ ಶರಣಾದರು. 

ಕೆಳ ನ್ಯಾಯಾಲಯವೊಂದು ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದ ನಂತರ, ಅವರು ಶರಣಾಗುವಂತೆ ಆದೇಶಿಸಿತ್ತು. ಸದ್ಯ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ.

ಇಂದೋರ್‌ನ ಉದ್ಯಮಿಯಾಗಿದ್ದ ರಾಜಾ ರಘುವಂಶಿ, ಹನಿಮೂನ್‌ ಹೋಗಿದ್ದ ವೇಳೆ ನಾಪತ್ತೆಯಾಗಿದ್ದರು.   ಅಂತಿಮವಾಗಿ, ಪೂರ್ವ ಖಾಸಿ ಬೆಟ್ಟಗಳ ಪ್ರದೇಶದಲ್ಲಿರುವ 'ವೇ ಸಾವ್ಡಾಂಗ್ ಜಲಪಾತ'ದ (Wei Sawdong Falls) ಸಮೀಪದ ಆಳವಾದ ಕಣಿವೆಯಲ್ಲಿ ಅವರ ಮೃತದೇಹ ಪತ್ತೆಯಾಯಿತು. ಈ ಅಪರಾಧ ಪ್ರಕರಣವನ್ನು ಭೇದಿಸಲು ಮೇಘಾಲಯ ಪೊಲೀಸರು ವಿಶೇಷ ತನಿಖಾ ತಂಡವನ್ನು ರಚಿಸಿದ್ದರು.

ಈ ಹತ್ಯೆಯು ಪೂರ್ವಯೋಜಿತ ಸಂಚಿನ ಭಾಗವಾಗಿತ್ತು ಎಂದು ತನಿಖಾಧಿಕಾರಿಗಳು ಹೇಳುತ್ತಾರೆ. ಸೋನಮ್ ತನ್ನ ಮಾಜಿ ಸಂಗಾತಿ ಮತ್ತು ಇತರ ಕೆಲವರೊಂದಿಗೆ ಸೇರಿ ಈ ಕೊಲೆಯನ್ನು ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. 

ಕೊಲೆಯನ್ನು ಮುಚ್ಚಿಹಾಕಲು ಮಧುಚಂದ್ರದ ಪ್ರವಾಸವನ್ನು ದುರುಪಯೋಗಪಡಿಸಿಕೊಂಡ ಈ ಪ್ರಕರಣವು ರಾಷ್ಟ್ರಮಟ್ಟದಲ್ಲಿ ಆಕ್ರೋಶಕ್ಕೆ ಕಾರಣವಾಯಿತು. ಕಾನೂನು ಹೋರಾಟ ತೀವ್ರಗೊಂಡಿದ್ದರಿಂದ ಖಾಸಿ ಬೆಟ್ಟಗಳ ಪ್ರದೇಶದಲ್ಲಿ ಪ್ರವಾಸೋದ್ಯಮದ ಮೇಲೆ ಪರಿಣಾಮ ಉಂಟಾಯಿತು.

ಈ ಪ್ರಕರಣದ ವಿಚಾರಣೆಯನ್ನು ತ್ವರಿತಗೊಳಿಸಬೇಕು ಮತ್ತು ಆರೋಪಿಗಳಿಗೆ ಮರಣದಂಡನೆ ವಿಧಿಸಬೇಕು ಎಂದು ಕುಟುಂಬವು ಒತ್ತಾಯಿಸುತ್ತಿದೆ. ಪುರುಷರು ಸಲ್ಲಿಸುವ ಕೌಟುಂಬಿಕ ದೌರ್ಜನ್ಯದ ದೂರುಗಳನ್ನು ಪೊಲೀಸರು ಸಾಮಾನ್ಯವಾಗಿ ನಿರ್ಲಕ್ಷಿಸುತ್ತಾರೆ ಎಂದು ಆರೋಪಿಸುವ ಮೂಲಕ ಬಿಪಿನ್ ವ್ಯವಸ್ಥೆಯನ್ನು ಟೀಕಿಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರಾವಳಿಯಲ್ಲಿ ರಣಭೀಕರ ಮಳೆ ನಡುವೆ ಮುಂದಿನ 24ಗಂಟೆ ಹೇಗಿರಲಿದೆ ಗೊತ್ತಾ ಹವಾಮಾನ

ಭ್ರಷ್ಟಾಚಾರ ಆರೋಪ ಹೊತ್ತಿರುವವರು, ಪಬ್‌ಗಳಲ್ಲಿ ಗಲಾಟೆ ಮಾಡಿದವರಿಗೆ ಕೊನೆಗೂ ಮಂತ್ರಿಸ್ಥಾನ

ಕೊನೆಗೂ ಡಿಕೆ ಶಿವಕುಮಾರ್ ಸಂಪುಟ ಸೇರಿದ 19 ಸಚಿವರು ಇವರೇ

ದೆಹಲಿ ಪ್ರತಿಭಟನೆಯಲ್ಲಿ ಭಾಗಿಯಾದವರ ವಿರುದ್ಧದ ಎಫ್ಐಆರ್ ಹಿಂಪಡೆಯುವ ಬಗ್ಗೆ ದೆಹಲಿ‌ ಕೋರ್ಟ್ ಮಹತ್ವದ ಸೂಚನೆ

ಎಲ್ಲಾ ಶಾಸಕರಿಗೂ ಒಂದೇ ಬಾರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಲು ಸಾಧ್ಯವಿಲ್ಲ

ಮುಂದಿನ ಸುದ್ದಿ
Show comments