ಹನಿಮೂನ್ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್: ಸೋನಂ ಎರಡನೇ ಮದುವೆ

Krishnaveni K
ಶುಕ್ರವಾರ, 4 ಜುಲೈ 2025 (12:04 IST)
ಇಂಧೋರ್: ಹನಿಮೂನ್ ಗೆ ಮೇಘಾಲಯಕ್ಕೆ ಹೋಗಿದ್ದಾಗ ಗಂಡ ರಾಜ ರಘುವಂಶಿಯನ್ನು ಸೋನಂ ತನ್ನ ಪ್ರಿಯಕರ ರಾಜ್ ಕುಶ್ವಾಹ ಜೊತೆ ಮರ್ಡರ್ ಮಾಡಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಆರೋಪಿ ಸೋನಂ ಎರಡನೇ ಮದುವೆ ಬಗ್ಗೆ ವಿಚಾರವೊಂದು ಹೊರಬಿದ್ದಿದೆ.

ಮೇ 23 ರಂದು ರಾಜ ರಘುವಂಶಿ ಮೇಘಾಲಯದಲ್ಲಿ ನಾಪತ್ತೆಯಾಗಿದ್ದ. ಅದಾದ 10 ದಿನದ ಬಳಿಕ ಆತನ ಮೃತದೇಹ ಮೇಘಾಲಯದ ಕಮರಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಪತ್ನಿ ಸೋನಂ ನಾಪತ್ತೆಯಾಗಿದ್ದಳು. ಮೃತದೇಹ ಸಿಕ್ಕ ಬೆನ್ನಲ್ಲೇ  ರಾಜ ರಘುವಂಶಿಯ ಹಂತಕರ ಪೈಕಿ ಇಬ್ಬರು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದರು. ಇದರ ಬೆನ್ನಲ್ಲೇ ಸ್ವತಃ ಪತ್ನಿ ಸೋನಂಳೇ ಈ ಕೃತ್ಯವೆಸಗಿದ್ದು ಪತ್ತೆಯಾಗಿತ್ತು. ಬಳಿಕ ಸೋನಂ ಹಾಗೂ ಆಕೆಯ ಪ್ರಿಯಕರ ರಾಜ್ ಕುಶ್ವಾಹನನ್ನೂ ಪೊಲೀಸರು ಬಂಧಿಸಿದ್ದರು.

ಇದೀಗ ರಾಜ ರಘುವಂಶಿಯ ಸಹೋದರ ಸೋನಂ ಬಗ್ಗೆ ದೊಡ್ಡ ಆರೋಪ ಮಾಡಿದ್ದಾನೆ. ಸೋನಂಳಿಂದ ಎರಡು ಮಾಂಗಲ್ಯ ಸರವನ್ನು ವಶಪಡಿಸಿಕೊಳ್ಳಲಾಗಿದೆ. ಇದರಲ್ಲಿ ಒಂದು ಮದುವೆ ಸಮಯದಲ್ಲಿ ರಾಜ ರಘುವಂಶಿ ಕಡೆಯಿಂದ ಸಿಕ್ಕಿದ್ದು. ಇನ್ನೊಂದು ಮಾಂಗಲ್ಯ ಸರ ಕೊಲೆ ನಡೆದ ಬಳಿಕ ಆಕೆ ಪ್ರಿಯಕರನ ಜೊತೆ ಎರಡನೇ ಮದುವೆಯಾಗಿರಬಹುದು. ಈ ತಾಳಿಸರ ಅದೇ ಇರಬೇಕು ಎಂದು ವಿಪಿನ್ ಆರೋಪಿಸಿದ್ದಾರೆ. ಇದೀಗ ವಿಪಿನ್ ಆರೋಪ ನಿಜವೇ ಎಂಬ ನಿಟ್ಟಿನಲ್ಲಿ ಪೊಲೀಸರು ತನಿಖೆ ನಡೆಸಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಕುರ್ಚಿ ರೇಸ್‌ನಲ್ಲಿ ನೀವಿದ್ದೀರಾ ಎಂದಿದ್ದಕ್ಕೆ ಪರಮೇಶ್ವರ್ ಪ್ರತಿಕ್ರಿಯೆ ಹೀಗಿತ್ತು

ಇಟಲಿ ಟೆಂಪಲ್ ಸುತ್ತಿ ಕಪ್ಪ ಒಪ್ಪಿಸಿದರೆ ಡಿಕೆ ಶಿವಕುಮಾರ್ ಸಿಎಂ: ಆರ್ ಅಶೋಕ

ಲೋಕಾನುಭವವಿರುವ ಸಿದ್ದರಾಮಯ್ಯರಿಗೆ ಇದು ತಿಳಿದಿಲ್ವ: ತೇಜಸ್ವಿ ಸೂರ್ಯ ಪ್ರಶ್ನೆ

ಕರ್ನಾಟಕದ ಜನತೆಗೆ ಗುಡ್‌ನ್ಯೂಸ್‌, ಬೆಂಗಳೂರು ಮುಂಬೈ ಸೂಪರ್ ಫಾಸ್ಟ್ ರೈಲಿಗೆ ಗ್ರೀನ್ ಸಿಗ್ನಲ್

ರೀಲ್ ಹುಚ್ಚಾಟಕ್ಕೆ 15ವರ್ಷದ ಬಾಲಕ ಸಾವು, Viral Video

ಮುಂದಿನ ಸುದ್ದಿ
Show comments