Select Your Language

Notifications

webdunia
webdunia
webdunia
webdunia

Meghalaya Murder Mystery: ಮರಣೋತ್ತರ ಪರೀಕ್ಷೆಯಲ್ಲಿ ಮಹಾಸ್ಫೋಟಕ ಮಾಹಿತಿ ಹೊರಕ್ಕೆ

ಮೇಘಾಲಯ ಮರ್ಡರ್ ಮಿಸ್ಟರಿ

Sampriya

ಮೇಘಾಲಯ , ಸೋಮವಾರ, 9 ಜೂನ್ 2025 (18:02 IST)
Photo Courtesy X
ಮೇಘಾಲಯ: ದೇಶವನ್ನೇ ಬೆಚ್ಚಿಬೀಳಿಸಿದ ರಾಜಾ ರಘುವಂಶಿ ಕೊಲೆ ಪ್ರಕರಣದ ನಿಗೂಢತೆ ಒಂದೊಂದಾಗಿ ಬಿಚ್ಚಿಕೊಳ್ಳುತ್ತಿದೆ. 

ಹತ್ಯೆಗೊಳಗಾದ ರಘುವಂಶಿ ಮೇಲೆ ಗಂಭೀರವಾಗಿ ಹಲ್ಲೆ ಮಾಡಲಾಗಿದೆ.  ಪತ್ನಿ ಸೋನಮ್ ಜತೆ ಹನಿಮೂನ್ ಪ್ರವಾಸಕ್ಕಾಗಿ ಮೇಘಾಲಯಕ್ಕೆ ಹೋಗಿದ್ದಾಗ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದ ರಾಜಾ ರಘುವಂಶಿ ಮೇಲೆ ಎರಡು ಬಾರಿ ದಾಳಿ ನಡೆಸಲಾಗಿದೆ ಎಂದು ಪ್ರಾಥಮಿಕ ಶವಪರೀಕ್ಷೆ ವರದಿ ಬಹಿರಂಗಪಡಿಸಿದೆ.

ಇಂದೋರ್ ಮೂಲದ ಉದ್ಯಮಿಯಾಗಿದ್ದ ರಾಜಾ ರಘುವಂಶಿ, ಗಂಭೀರ ದಾಳಿಯಿಂದ ಸಾವನ್ನಪ್ಪಿದ್ದಾರೆ. ಹತ್ಯೆಗೆ ಸಂಚನ್ನು ಪತ್ನಿ ಸೋನಮ್ ಮತ್ತು ಆಕೆಯ ಪ್ರಿಯಕರ ರಾಜ್ ಕುಶ್ವಾಹ ಮತ್ತು ಇತರ ಸಹಾಯಕರು ರೂಪಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಕೊಲೆ ಪ್ರಕರಣವು ದೇಶಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಪ್ರಕರಣ ಸಂಬಂಧ ಪತ್ನಿಯೇ ಪ್ರಮುಖ ಆರೋಪಿ ಎಂದು ಗುರುತಿಸಲಾಗಿದೆ.  

ಮೂಲಗಳ ಪ್ರಕಾರ, ಅವರ ಆಪಾದಿತ ಪ್ರೇಮಿಯೇ ಕೊಲೆ ಸಂಚಿನ ಮಾಸ್ಟರ್ ಮೈಂಡ್ ಎಂದು ಶಂಕಿಸಲಾಗಿದೆ. ಸೋನಮ್ ಮತ್ತು ರಾಜ್ ಹೊರತುಪಡಿಸಿ, ಪ್ರಕರಣದಲ್ಲಿ ಹೆಸರಿಸಲಾದ ಇತರ ಮೂವರು - ವಿಕಿ ಠಾಕೂರ್, ಆಕಾಶ್ ಮತ್ತು ಆನಂದ್ - ಈ ಕ್ರೂರ ಹತ್ಯೆಯನ್ನು ಮಾಡಿದ್ದಾರೆ ಎನ್ನಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

Mumbai Train Tragedy: ರೈಲ್ವೆ ಮಂಡಳಿಯಿಂದ ದಿಢೀರ್‌ ಕ್ರಮ, ಇಲ್ಲಿದೆ ಡೀಟೆಲ್ಸ್‌