Webdunia - Bharat's app for daily news and videos

Install App

ಪಾಕಿಸ್ತಾನವನ್ನು ಕೆರಳಿಸಬೇಡಿ, ಉದ್ರಿಕ್ತತೆ ಇಳಿಮುಖವಾಗಲಿ: ಪ್ರಧಾನಿಗೆ ಮೆಹಬೂಬಾ ಮುಫ್ತಿ ಮನವಿ

Webdunia
ಗುರುವಾರ, 6 ಅಕ್ಟೋಬರ್ 2016 (12:40 IST)
ನೆರೆರಾಷ್ಟ್ರವಾದ ಪಾಕಿಸ್ತಾನದೊಂದಿಗಿನ ಉದ್ರಿಕ್ತತೆಯನ್ನು ಕಡಿಮೆಗೊಳಿಸುವ ನಿಟ್ಟಿನಲ್ಲಿ ಪ್ರಯತ್ನಿಸಿ ಎಂದು ಜಮ್ಮು ಕಾಶ್ಮಿರದ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ, ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಮನವಿ ಮಾಡಿದ್ದಾರೆ.
 
ನವದೆಹಲಿಯಲ್ಲಿ ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿದ, ಮೆಹಬೂಬಾ ಜಮ್ಮು ಕಾಶ್ಮಿರದ ರಾಜಕೀಯ, ಆರ್ಥಿಕ ಮತ್ತು ಅಭಿವೃದ್ಧಿಗಾಗಿ ನೆರೆರಾಷ್ಟ್ರದೊಂದಿಗೆ ಉತ್ತಮ ಬಾಂಧವ್ಯ ಹೊಂದುವುದು ಅಗತ್ಯವಾಗಿದೆ ಎಂದು ಪ್ರತಿಪಾದಿಸಿದ್ದಾರೆ. 
 
ಪಾಕ್ ಆಕ್ರಮಿತ ಕಾಶ್ಮಿರದಲ್ಲಿ ನಡೆದ ಸೀಮಿತ ದಾಳಿಯ ನಂತರ ಮೊದಲ ಬಾರಿಗೆ ಪ್ರಧಾನಿ ಮೋದಿಯನ್ನು ಭೇಟಿ ಮಾಡಿದ ಮುಫ್ತಿ, ಗಡಿರೇಖೆ ಭದ್ರತೆ ಕುರಿತಂತೆ ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ,
 
ಕಳೆದ 88 ದಿನಗಳಿಂದ ಜಮ್ಮು ಕಾಶ್ಮಿರದಲ್ಲಿ ಜನಜೀವನ ಅಸ್ತವ್ಯಸ್ಥವಾಗಿದ್ದು ರಾಜ್ಯದ ಜನತೆ ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಜನರಿಗೆ ನೆಮ್ಮದಿ ನೀಡುವ ಕಾಲ ಇದಾಗಿದೆ ಎಂದು ತಿಳಿಸಿದ್ದಾರೆ.  
 
ಕೇಂದ್ರ ಸರಕಾರ ಜಮ್ಮು ಕಾಶ್ಮಿರದ ನಾಯಕರ ಜೊತೆ ಚರ್ಚಿಸಿ, ಸ್ಥಳೀಯ ಸಮಸ್ಯೆಗಳಿಗೆ ಶೀಘ್ರದಲ್ಲಿಯೇ ಪರಿಹಾರ ಒದಗಿಸಿಕೊಡಬೇಕು ಎಂದು ಜಮ್ಮು ಕಾಶ್ಮಿರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ, ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments