Publish Date: Thu, 05 Jan 2017 (18:53 IST)
Updated Date: Thu, 05 Jan 2017 (18:57 IST)
ಪ್ರಿಯಕರನ ಜತೆಗೂಡಿ ಪತ್ನಿ ತನಗೆ ಜೀವಬೆದರಿಕೆ ಹಾಕುತ್ತಿದ್ದಾಳೆ, ನ್ಯಾಯ ದೊರಕಿಸಿ ಕೊಡಿ ಎಂದು ಮೈಸೂರಿನಲ್ಲಿ ರವಿ ಎಂಬಾತ ಮಾಧ್ಯಮಗೋಷ್ಠಿ ನಡೆಸಿ ಮನವಿ ಮಾಡಿಕೊಂಡಿದ್ದಾನೆ.
ನಂಜನಗೂಡು ಪಟ್ಟಣದಲ್ಲಿ ನೀರಾವರಿ ಇಲಾಖೆಯಲ್ಲಿ ಡಿ ಗ್ರೂಪ್ ನೌಕರರಾಗಿ ಸೇವೆ ಸಲ್ಲಿಸುತ್ತಿದ್ದು, ಕಳೆದ 12 ವರ್ಷಗಳಿಂದ ಪತ್ನಿ ಮತ್ತು ಆಕೆಯ ಪ್ರಿಯಕರ ತನಗೆ ಮಾನಸಿಕ ಹಿಂಸೆ ನೀಡುತ್ತಿದ್ದಾರೆ, ಕೊಲೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಆತ ಆರೋಪಿಸುತ್ತಿದ್ದಾನೆ.
ಕಳೆದ 12 ವರ್ಷಗಳ ಹಿಂದೆ ರವಿ ಅವರಿಗೆ ಮದುವೆಯಾಗಿದ್ದು, 11 ವರ್ಷದ ಮಗನಿದ್ದಾನೆ. 8 ವರ್ಷ ತನ್ನೊಂದಿಗೆ ಅನ್ಯೋನ್ಯವಾಗಿದ್ದ ಪತ್ನಿ ಕಳೆದ 4 ವರ್ಷಗಳಿಂದ ಬಿಜೆಪಿ ಮುಖಂಡರೊಬ್ಬರೊಂದಿಗೆ ಅಕ್ರಮ ಸಂಬಂಧವನ್ನು ಇಟ್ಟುಕೊಂಡಿದ್ದಾಳೆ. ಇದನ್ನು ಪ್ರಶ್ನೆ ಮಾಡಿದರೆ ಅವರಿಬ್ಬರು ನನಗೆ ಕೊಲ್ಲುವುದಾಗಿ ಬೆದರಿಸುತ್ತಿದ್ದಾರೆ ಎಂದು ರವಿ ಮಾಧ್ಯಮದೆದುರು ಅಳಲು ತೋಡಿಕೊಂಡಿದ್ದಾರೆ.
ವಿಚ್ಛೇದನ ನೀಡೆಂದರೂ ಆಕೆ ಒಪ್ಪುತ್ತಿಲ್ಲ. ಪೊಲೀಸರಿಗೆ ದೂರು ನೀಡಿದರೂ ಪ್ರಯೋಜನವಾಗಿಲ್ಲ ಎಂದು ರವಿ ತಮ್ಮ ಅಸಹಾಯಕತೆಯನ್ನು ತೋಡಿಕೊಂಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ