Webdunia - Bharat's app for daily news and videos

Install App

19 ವರ್ಷದ ಯುವತಿಯನ್ನು ಅಪಹರಿಸಲು ಯತ್ನಿಸಿದ ಮೂವರು ದುಷ್ಕರ್ಮಿಗಳು

Webdunia
ಶನಿವಾರ, 28 ಮೇ 2016 (11:23 IST)
ಡ್ರಾಪ್ ಕೊಡುವುದಾಗಿ 19 ವರ್ಷದ ಯುವತಿ ಮತ್ತು ಆಕೆಯ ಸಹೋದರನನ್ನು ಕಾರಿಗೆ ಹತ್ತಿಸಿಕೊಂಡ ಆರೋಪಿಗಳು ನಂತರ ಸಹೋದರನ ಪರ್ಸ್ ಮತ್ತು ಮೊಬೈಲ್ ಕಸಿದುಕೊಂಡು ಹೊರಗೆ ಹಾಕಿದ ಘಟನೆ ವರದಿಯಾಗಿದೆ.
 
ಯುವತಿಯ ಸಹೋದರ ನಡೆದ ಘಟನೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದರಿಂದ 19 ವರ್ಷದ ಯುವತಿಯನ್ನು ಅಪಹರಿಸಿದ ಮೂವರು ಆರೋಪಿಗಳನ್ನು ಸುಮಾರು ಆರು ಕಿ.ಮೀಗಳ ದೂರದಲ್ಲಿ ಬೆನ್ನಟ್ಟಿ ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.  
 
ಪೊಲೀಸ್ ಮೂಲಗಳ ಪ್ರಕಾರ, ಯುವತಿ ಮತ್ತು ಆಕೆಯ ಸಹೋದರ ವಜೀರಾಬಾದ್‌ನಲ್ಲಿರುವ ತಮ್ಮ ನಿವಾಸಕ್ಕೆ ತೆರಳುತ್ತಿರುವಾಗ ಹತ್ತಿರದಲ್ಲಿಯೇ ಬಂದ ಕಾರೊಂದು ಬಂದು ನಿಂತಿದೆ. ಕಾರಿನ ಚಾಲಕ ವಿಳಾಸವನ್ನು ಕೇಳಿದಾಗ ಸಹೋದರ ಮಾಹಿತಿ ನೀಡಿದ್ದಾನೆ. 
 
ತಾವು ಅದೇ ಮಾರ್ಗದಲ್ಲಿ ತೆರಳುತ್ತಿರುವುದಾಗಿ ತಿಳಿಸಿ ಕಾರು ಹತ್ತುವಂತೆ ಯುವತಿ ಮತ್ತು ಆಕೆಯ ಸಹೋದರನಿಗೆ ಮನವಿ ಮಾಡಿದ್ದಾನೆ ಎನ್ನಲಾಗಿದೆ.
 
ಯುವತಿ ಮತ್ತು ಆಕೆಯ ಸಹೋದರ ಕಾರಿನಲ್ಲಿ ಕುಳಿತಕೊಂಡ ಕೂಡಲೇ ಕಾರಿನಲ್ಲಿದ್ದ ಇಬ್ಬರು ಆರೋಪಿಗಳು ಸಹೋದರನ ಪರ್ಸ್ ಕಸಿದುಕೊಂಡು ಹೊರಹಾಕಿ, ಆತನ ಸಹೋದರಿಯೊಂದಿಗೆ ಪರಾರಿಯಾಗಿದ್ದಾರೆ.
 
ಆರೋಪಿಗಳನ್ನು ಸಚಿನ್ ಚೌಧರಿ(32)ಶಿವಕುಮಾರ್(32) ಮತ್ತು ಸೌರಭ ಎಂದು ಗುರುತಿಸಲಾಗಿದ್ದು, ಆರೋಪಿಗಳ ವಿರುದ್ಧ ಅಪಹರಣ, ದರೋಡೆ ಮತ್ತು ಅಪರಾಧಿಕ ದೌರ್ಜನ್ಯದಡಿ ಕೇಸ್‌ಗಳನ್ನು ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ: ಎಂಎನ್‌ಎಸ್ ಮುಖಂಡನ ಪುತ್ರನ ದೌಲತ್ತಿಗೆ ಸರಿಯಾಗಿ ಮಾಡಿದ ಖಾಕಿ

ಟ್ರಾಫಿಕ್‌ ಜಾಮ್‌ಗೆ ಸುಸ್ತು: ಖಾಸಗಿ ಮೇಲ್ಸೇತುವೆ ನಿರ್ಮಿಸಲು ಮುಂದಾದ ಪ್ರೆಸ್ಟೀಜ್ ಗ್ರೂಪ್‌

ದ.ಕನ್ನಡದಲ್ಲಿ ಹೆಚ್ಚುತ್ತಿರುವ ಮಲೇರಿಯಾ ಪ್ರಕರಣ: ವಲಸೆ ಕಾರ್ಮಿಕರ ಮೇಲೆ ಹೆಚ್ಚಿನ ನಿಗಾ

ಪಹಲ್ಗಾಮ್‌ ದಾಳಿ, ಪಾಕ್‌ ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರಿಗೆ ಬಿಗ್‌ ಶಾಕ್‌

ಸಿದ್ದರಾಮಯ್ಯ ಮಾಸ್ ಲೀಡರ್, ಅವರು ಇಲ್ಲೇ ಇರಬೇಕಾದವರಲ್ಲ: ಲಕ್ಷ್ಮೀ ಹೆಬ್ಬಾಳ್ಕರ್

ಮುಂದಿನ ಸುದ್ದಿ
Show comments