Webdunia - Bharat's app for daily news and videos

Install App

ಕೆಲಸ ಕೊಡಿಸುವುದಾಗಿ ನಂಬಿಸಿ ವಿಕಲಚೇತನ ಮಹಿಳೆಯ ಮೇಲೆ ಅತ್ಯಾಚಾರವೆಸಗಿದ ಕಾಮುಕ

Webdunia
ಗುರುವಾರ, 20 ಸೆಪ್ಟಂಬರ್ 2018 (06:41 IST)
ಹೈದರಾಬಾದ್ : ಕೆಲಸ ಕೊಡಿಸ್ತೀನಿ ಅಂತ ಹೇಳಿ ಹಲವು ತಿಂಗಳಿನಿಂದ 29 ವರ್ಷದ ವಿಕಲಚೇತನ ಮಹಿಳೆಗೆ ವಂಚಿಸಿ ಆಕೆಯಿಂದ 3 ಲಕ್ಷ ಹಣವನನ್ನು  ಪಡೆದುಕೊಂಡಿದಲ್ಲದೇ ಆಕೆಯ ಮೇಲೆ ಅತ್ಯಾಚಾರವೆಸಗಿದ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.


ಆರೋಪಿ ಸೋಮ ಸೈಲು ಎಂದು ಗುರುತಿಸಲಾಗಿದ್ದು, ಈತ ರಸ್ತೆ ಸಾರಿಗೆ ನಿಗಮ(ಆರ್‍ಟಿಸಿ)ದಲ್ಲಿ ಕೆಲಸ ನಿರ್ವಹಿಸುತ್ತಿದ್ದನು. ಸಂತ್ರಸ್ತ ಮಹಿಳೆಯ ಪತಿ ಕೂಡ ರಸ್ತೆ ಸಾರಿಗೆ ನಿಗಮ(ಆರ್‍ಟಿಸಿ)ದಲ್ಲಿ ಕೆಲಸ ಮಾಡುತ್ತಿದ್ದ. ಆತನ ಸಾವಿನ ನಂತರ ಆ ಕೆಲಸವನ್ನು ತಾನು ಪಡೆದುಕೊಳ್ಳಲು ಪ್ರಯತ್ನಿಸುತ್ತಿದ್ದ ಆ ಮಹಿಳೆಗೆ ಸೋಮ ಸೈಲು ಕೆಲಸ ಕೊಡಿಸುವುದಾಗಿ ಭರವಸೆ ನೀಡಿದ್ದಾನೆ. ಅಲ್ಲದೇ ನಕಲು ಐಡಿ ಹಾಗೂ ಸ್ಯಾಲರಿ ಸ್ಲಿಪ್ ಗಳನ್ನು ಮಾಡಿ ಕಚೇರಿ ಹೋಗದಿದ್ದರೂ ತಮ್ಮ ಅಕೌಂಟ್ ಗೆ ಹಣ ನೀಡುವುದಾಗಿ ಸುಳ್ಳು ಹೇಳಿದ್ದಾನೆ. ಹಾಗೇ ಆಕೆಯಿಂದ 3 ಲಕ್ಷ ಹಣವನ್ನು  ಪಡೆದುಕೊಂಡಿದ್ದಾನೆ.


ಅಷ್ಟೇ ಅಲ್ಲದೇ ಒಂದು ದಿನ ಆಕೆಯ ಮನೆಗೆ ಬಂದು ಸ್ವೀಟ್ಸ್ ನೀಡಿ ಆಕೆ ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಎಸೆಗಿದ್ದಾನೆ. ಹೀಗೆ ಆಕೆಯ ಮಗನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿ ಹಲವು ಬಾರಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ.


 ಈ ಬಗ್ಗೆ ಮಹಿಳೆ ಇದೀಗ ಹೈದರಾಬಾದ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಸದ್ಯ ಮಹಿಳೆಯ ದೂರಿನಂತೆ ಪೊಲೀಸರು ಆರೋಪಿಯನ್ನು ಬಂಧಿಸಿ ಆತನ ವಿರುದ್ಧ ಅತ್ಯಾಚಾರ ಹಾಗೂ ವಂಚನೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rajastan: ಜೈಪುರದಿಂದ ಪ್ರವಾಸಕ್ಕೆ ಬಂದಿದ್ದ ಎಂಟು ಯುವಕರು ಬನಾಸ್‌ ನದಿಯಲ್ಲಿ ಮುಳುಗಿ ದಾರುಣ ಸಾವು

Cabinet reshuffle: ಸಿದ್ದರಾಮಯ್ಯ ಸಂಪುಟದಲ್ಲಿ ಇಷ್ಟು ಸಚಿವರಿಗೆ ಕೊಕ್, ಲಿಸ್ಟ್ ನಲ್ಲಿ ಯಾರೆಲ್ಲಾ ಇದ್ದಾರೆ

Indore Raja Raguvamshi Case: ಸೊಸೆಯ ಬಗ್ಗೆ ಇಂಚಿಂಚು ಮಾಹಿತಿ ಬಿಚ್ಚಿಟ್ಟ ರಾಜ ರಘುವಂಶಿ ತಾಯಿ

Coastal Karnataka: ಕರಾವಳಿಯ ಮಳೆಗಾಲದ ಅತಿಥಿ ಕಲ್ಲಣಬೆಗೆ ಭಾರೀ ಡಿಮ್ಯಾಂಡ್‌

Modi: ಮೋದಿ ಎಲ್ಲಿ ಪ್ರಚಾರ ಸಿಗುತ್ತೋ ಅಲ್ಲಿ ಮಾತ್ರ ಹೋಗ್ತಾರಾ: ಪ್ರಲ್ಹಾದ್ ಜೋಶಿ ಏನು ಹೇಳಿದ್ರು

ಮುಂದಿನ ಸುದ್ದಿ
Show comments