ಚೆನ್ನೈಗೆ ಅಪ್ಪಳಿಸಿದ ಮೈಚಾಂಗ್ ಚಂಡಮಾರುತ: ತಿರುಚ್ಚಿ ಹೈವೇ ಜಲಾವೃತ

Webdunia
ಸೋಮವಾರ, 4 ಡಿಸೆಂಬರ್ 2023 (13:10 IST)
Photo Courtesy: Twitter
ಚೆನ್ನೈ: ಮೈಚಾಂಗ್ ಚಂಡಮಾರುತ ತಮಿಳುನಾಡಿನ ಕರಾವಳಿ ಪ್ರದೇಶಕ್ಕೆ ಅಪ್ಪಳಿಸಿದ್ದು, ಚೆನ್ನೈನಲ್ಲಿ ರಸ್ತೆ, ವಿಮಾನ ನಿಲ್ದಾಣ ಜಲಾವೃತವಾಗಿದೆ.

ಚಂಡಮಾರುತದ ಪರಿಣಾಮ ಚೆನ್ನೈನಲ್ಲಿ ಭಾರೀ ಮಳೆಯಾಗುತ್ತಿದೆ. ಇದರಿಂದಾಗಿ ಚೆನ್ನೈನ ವಿಮಾನ ನಿಲ್ದಾಣ ಜಲಾವೃತವಾಗಿದ್ದು, ಕೆಲವು ವಿಮಾನಗಳ ಹಾರಾಟ ರದ್ದು ಮಾಡಲಾಗಿದೆ.

ಅಷ್ಟೇ ಅಲ್ಲದೆ, ತಿರುಚ್ಚಿ ರಾಷ್ಟ್ರೀಯ ಹೆದ್ದಾರಿಯಲ್ಲೂ ನೀರು ತುಂಬಿಕೊಂಡಿದ್ದು, ಪ್ರಯಾಣ ಕಷ್ಟವಾಗಿದೆ. ಸೈಕ್ಲೋನ್ ನಿಂದಾಗಿ ಚೆನ್ನೈನಲ್ಲಿ ಪ್ರವಾಹ ಪರಿಸ್ಥಿತಿಯಿದ್ದು ಜನರು ಎಚ್ಚರಿಕೆಯಿಂದಿರಲು ಸೂಚಿಸಲಾಗಿದೆ.

ಜನರು ಮನೆಯಿಂದ ಹೊರಬರಲಾರದ ಸ್ಥಿತಿ ಎದುರಾಗಿದೆ. ರಸ್ತೆ ಬದಿ ನಿಲ್ಲಿಸಿದ್ದ ವಾಹನಗಳು ನೀರಿನಲ್ಲಿ ತೇಲಿಕೊಂಡು ಹೋಗುವಂತಹ ದೃಶ್ಯಗಳು ಕಂಡುಬಂದಿದೆ. ಮೈಚಾಂಗ್ ಚಂಡಮಾರುತದ ಪರಿಣಾಮ ರಾಜ್ಯಕ್ಕೂ ತಟ್ಟಿದ್ದು, ಬೆಂಗಳೂರು ಸೇರಿದಂತೆ ಹಲವೆಡೆ ಮೋಡ ಕವಿದ ವಾತಾವರಣ, ಸಣ್ಣ ಪ್ರಮಾಣದಲ್ಲಿ ಮಳೆಯಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇತನ್ ಅಗರ್ವಾಲ್ ರನ್ನು ಕೊಲೆ ಮಾಡಿದ್ದು ಯಾಕೆ: ಶಾಕಿಂಗ್ ಕಾರಣ ಬಿಚ್ಚಿಟ್ಟ ಸಿಯಾ ಗೋಯಲ್

Karnataka Weather: ಕರ್ನಾಟಕದ ಈ ಜಿಲ್ಲೆಗಳಿಗೆ ಇಂದು ಭಾರೀ ಮಳೆ ಸಂಭವ

ಅಡ್ಡಮತದಾನ ಮಾಡಿದವರ ವಿರುದ್ಧ ಕೇಂದ್ರ ನಾಯಕರು ಶೀಘ್ರ ಕ್ರಮ ಕೈಗೊಳ್ತಾರೆ: ಛಲವಾದಿ ನಾರಾಯಣಸ್ವಾಮಿ

ಮುಂಬೈ ಲೋಕಲ್ ಟ್ರೈನ್ ನಲ್ಲಿ ಬಾಗಿಲು ಮುಚ್ಚುವ ವಿಚಾರಕ್ಕೆ ಜಗಳ ಕೊಲೆಯಲ್ಲಿ ಅಂತ್ಯ: ಭೀಕರ Video

ಕೇತನ್ ಅಗರ್ವಾಲ್ ಹತ್ಯೆ ಮಾಡುವ ಕೆಲವೇ ಗಂಟೆ ಮುಂಚೆ ಸಿಯಾ ಮಾಡಿದ ಕೆಲಸವೇನು ಗೊತ್ತಾ: ಶಾಕಿಂಗ್

ಮುಂದಿನ ಸುದ್ದಿ
Show comments