Webdunia - Bharat's app for daily news and videos

Install App

ಲಾಕ್ ಡೌನ್ ವಿಸ್ತರಣೆ: ಮಧ್ಯಮ ವರ್ಗದವರ ಗೋಳು ಕೇಳೋರು ಯಾರು?

Webdunia
ಬುಧವಾರ, 15 ಏಪ್ರಿಲ್ 2020 (09:22 IST)
ಬೆಂಗಳೂರು: ಲಾಕ್ ಡೌನ್ ನಿಂದಾಗಿ ಶ್ರೀಮಂತ ವರ್ಗದವರು ಸ್ವಲ್ಪ ಮಟ್ಟಿಗೆ ಹೊಡೆತ ಅನುಭವಿಸುತ್ತಾರೆ. ಆದರೆ ಅವರ ಜೀವನೋಪಾಯಕ್ಕೆ ತೊಂದರೆಯಾಗುವುದಿಲ್ಲ. ಬಡ ವರ್ಗದವರಿಗೆ ಸರ್ಕಾರ ನೆರವಿನ ಭರವಸೆ ನೀಡಿದೆ. ಆದರೆ ಇದೆಲ್ಲದರ ನಡುವೆ ಸಂಕಷ್ಟಕ್ಕೀಡಾದವರು ಮಧ‍್ಯಮ ವರ್ಗದವರು.


ತಿಂಗಳ ಸಂಬಳ ನೆಚ್ಚಿಕೊಂಡು ಬದುಕುತ್ತಿರುವ ಹಲವು ಕುಟುಂಬಗಳು ವೇತನವೂ ಬರದೇ ತೊಂದರೆ ಅನುಭವಿಸುತ್ತಿದ್ದಾರೆ. ಸರ್ಕಾರವೇನೋ ವೇತನ ನೀಡಬೇಕು ಎಂದು ಆದೇಶಿಸಿದೆ. ಆದರೂ ಕೆಲವು ಖಾಸಗಿ ಕಂಪನಿಗಳು ವೇತನ ನೀಡದೇ ಸತಾಯಿಸುತ್ತಿವೆ. ಇನ್ನು, ಕೆಲವರು ಉದ್ಯೋಗ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ.

ಕೆಲವು ಕುಟುಂಬಗಳು ತಮ್ಮ ತಿಂಗಳ ಸಂಬಳ ನೆಚ್ಚಿಕೊಂಡು ಲೋನ್ ಮಾಡಿಕೊಂಡಿದ್ದೂ ಇದೆ. ಇವರೆಲ್ಲರ ಪರಿಸ್ಥಿತಿ ಈಗ ಹೇಳುವಂತಿಲ್ಲ. ಈಗಲೇ ಹೀಗಾದರೆ ಲಾಕ್ ಡೌನ್ ಮುಗಿದ ಬಳಿಕ ಸ್ಥಿತಿ ಮತ್ತಷ್ಟು ಬಿಗಡಾಯಿಸಲಿದೆ. ಅಂತೂ ಕೊರೋನಾ ಎಂಬ ಮಹಾಮಾರಿ ಹಲವರ ಬದುಕು ದುಸ್ತರವಾಗಿಸಿರುವುದು ಸುಳ್ಳಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments