ಯೋಧರ ವಾಹನದ ಮೇಲೆ ಉಗ್ರರಿಂದ ಗುಂಡಿನ ದಾಳಿ !

Webdunia
ಶುಕ್ರವಾರ, 21 ಏಪ್ರಿಲ್ 2023 (11:05 IST)
ಶ್ರೀನಗರ : ಭಿಂಬರ್ ಗಲಿ ಪ್ರದೇಶದ ಬಳಿ ನಡೆದ ಉಗ್ರರ ದಾಳಿ ವೇಳೆ ಯೋಧರ ವಾಹನದ ಮೇಲೆ ಗುಂಡು ಹಾರಿಸಿದ್ದಾರೆ. ನಂತರ ಗ್ರೆನೇಡ್ ದಾಳಿಯ ಸಾಧ್ಯತೆಯಿಂದಾಗಿ ಬೆಂಕಿ ಹೊತ್ತಿಕೊಂಡಿದೆ ಎಂದು ಸೇನೆ ಶಂಕಿಸಿದೆ.

ಈ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ಸಂಸ್ಥೆಯ ತಂಡ ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಗೆ ಆಗಮಿಸಲಿದೆ. ಗುರುವಾರ ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯ ಭಿಂಬರ್ ಗಲಿ ಪ್ರದೇಶದ ಬಳಿ ಸೇನಾ ವಾಹನವನ್ನು ಗುರಿಯಾಗಿಸಿ ಉಗ್ರರು ದಾಳಿ ನಡೆಸಿದ್ದರು. ಈ ವೇಳೆ ಐವರು ಯೋಧರು ಹುತಾತ್ಮರಾಗಿದ್ದು, ಓರ್ವ ಯೋಧ ಗಾಯಗೊಂಡಿದ್ದಾರೆ.

ಘಟನೆಗೆ ಸಂಬಂಧಿಸಿ ಎನ್ಐಎ ತಂಡ ಶುಕ್ರವಾರ ಮಧ್ಯಾಹ್ನ 12:30ರ ಸುಮಾರಿಗೆ ದೆಹಲಿಯಿಂದ ವಿಧಿವಿಜ್ಞಾನ ತಜ್ಞರೊಂದಿಗೆ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಲಿದೆ. ದಾಳಿಯಲ್ಲಿ ಮೃತಪಟ್ಟ ಯೋಧರನ್ನು ಹವಿಲ್ದಾರ್ ಮನ್ದೀಪ್ ಸಿಂಗ್, ದೇಬಾಶಿಶ್ ಬಸ್ವಾಲ್, ಕುಲ್ವಂತ್ ಸಿಂಗ್, ಹಕ್ರ್ರಿಶನ್ ಸಿಂಗ್ ಮತ್ತು ಸೇವಕ್ ಸಿಂಗ್ ಎಂದು ಗುರುತಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಕ್‌ನಲ್ಲಿ ರಕ್ತದೋಕುಳಿ: ಎನ್‌ಕೌಂಟರ್‌ ವೇಳೆ 11 ಯೋಧರು ಸೇರಿ 30 ಮಂದಿ ಸಾವು

ಕಮಲದ ವಿನ್ಯಾಸದಲ್ಲಿ ತಯಾರಾದ ಮುಂಬೈನ ಹೊಸ ವಿಮಾನ ನಿಲ್ದಾಣ ಉದ್ಘಾಟಿಸಿದ ಮೋದಿ

134 ದಿನಗಳ ಹೋರಾಡಿಯೂ ಮಗಳ ಬಿಟ್ಟು ಹೊರಟೇ ಹೋದ ಅಪೂರ್ವ: ಮನಕಲಕುವ ಘಟನೆ

ಬಿಗ್‌ಬಾಸ್‌ ಮನೆಗೆ ಬೀಗ ಹಾಕಿದ ಹಾಗೇ, ಪಿಕ್‌ಪಾಕೆಟ್ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಯಾವಾಗ ಬೀಗ ಹಾಕುತ್ತೀರಾ

ಅಧಿಕೃತ ಸಂವಹನಕ್ಕಾಗಿ zohoಮೇಲ್‌ಗೆ ಬದಲಾಯಿಸಿಕೊಂಡ ಅಮಿತ್‌ ಶಾ

ಮುಂದಿನ ಸುದ್ದಿ
Show comments