ಕಟ್ಟಡ ನಿರ್ಮಾಣಕ್ಕೆ ಸುಪ್ರೀಂ ಬ್ರೇಕ್‌!?

Webdunia
ಸೋಮವಾರ, 6 ಜೂನ್ 2022 (10:20 IST)
ನವದೆಹಲಿ : ರಾಷ್ಟ್ರೀಯ ಉದ್ಯಾನಗಳು ಹಾಗೂ ವನ್ಯಜೀವಿ ರಕ್ಷಿತಾರಣ್ಯಗಳ ಸುತ್ತಲಿನ 1 ಕಿ.ಮೀ. ವ್ಯಾಪ್ತಿಯ ಪ್ರದೇಶವನ್ನು ‘ಬಫರ್ ವಲಯ’ ಎಂದು ಪರಿಗಣಿಸಬೇಕು,
 
ಎಂದು ಆದೇಶಿಸಿರುವ ಸರ್ವೋಚ್ಚ ನ್ಯಾಯಾಲಯ, ಈ ವ್ಯಾಪ್ತಿಯಲ್ಲಿ ಯಾವುದೇ ಗಣಿಗಾರಿಕೆ ನಡೆಯಬಾರದು ಹಾಗೂ ಕಾರ್ಖಾನೆಗಳು, ಕಾಯಂ ಕಟ್ಟಡಗಳು ತಲೆಯೆತ್ತಕೂಡದು ಎಂಬ ಮಹತ್ವದ ಸೂಚನೆ ನೀಡಿದೆ.

ಅರಣ್ಯ ರಕ್ಷಣೆ ಕುರಿತಂತೆ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನ್ಯಾ| ಎಲ್. ನಾಗೇಶ್ವರರಾವ್ ನೇತೃತ್ವದ ತ್ರಿಸದಸ್ಯ ಪೀಠ ಈ ಆದೇಶ ಹೊರಡಿಸಿದೆ.

‘ರಾಷ್ಟ್ರೀಯ ಉದ್ಯಾನಗಳು ಹಾಗೂ ವನ್ಯಜೀವಿ ರಕ್ಷಿತಾರಣ್ಯಗಳ ಸುತ್ತಲಿನ 1 ಕಿ.ಮೀ. ವ್ಯಾಪ್ತಿಯ ಪ್ರದೇಶವನ್ನು ಪರಿಸರ ಸೂಕ್ಷ್ಮ ವಲಯ (ಇಎಸ್ಝಡ್) ಎಂದು ಪರಿಗಣಿಸಬೇಕು. ಇಲ್ಲಿ ಗಣಿಗಾರಿಕೆಗೆ ಅನುಮತಿಸಕೂಡದು.

ಕಾರ್ಖಾನೆ ಹಾಗೂ ಕಾಯಂ ಕಟ್ಟಡಗಳ ನಿರ್ಮಾಣ ನಡೆಯಬಾರದು. ಈ ವ್ಯಾಪ್ತಿಯಲ್ಲಿ ಈಗಾಗಲೇ ಕಟ್ಟಡಗಳು ತಲೆಯೆತ್ತಿದ್ದರೆ ಅಂಥ ಕಟ್ಟಡಗಳ ಪಟ್ಟಿಯನ್ನು ಎಲ್ಲ ರಾಜ್ಯಗಳ ಅರಣ್ಯ ಸಂರಕ್ಷಣಾಧಿಕಾರಿಗಳು ಸಿದ್ಧಪಡಿಸಬೇಕು ಹಾಗೂ ಇನ್ನು 3 ತಿಂಗಳ ಒಳಗೆ ನಮಗೆ ವರದಿ ಸಲ್ಲಿಸಬೇಕು’ ಎಂದು ನಿರ್ದೇಶಿಸಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೂರು ವರ್ಷಗಳಿಂದ ನಾನು ಟೀಕೆ ಮಾಡಿದ್ದೇನೆ. ಈಗ ಅದಕ್ಕೆ ಸಮಯವಲ್ಲ

ಹಾಸನ ಜಿಲ್ಲೆಯ ಏಕೈಕ ಕೈ ಶಾಸಕ ಕೆಎಂ ಶಿವಲಿಂಗೇಗೌಡಗೆ ಸಚಿವ ಸ್ಥಾನ ನೀಡಲು ರಾಹುಲ್‌ಗೆ ಪತ್ರ

ಸಿದ್ದರಾಮಯ್ಯ ಈ ಮಾತು ಡಿಕೆ ಶಿವಕುಮಾರ್‌ಗೆ ಎಚ್ಚರಿಕೆ ಗಂಟೆ: ಡಿಕೆ ಸುಧಾಕರ್‌

ಡೇಟ್ ಫಿಕ್ಸ್ ಆಗದಿದ್ದರೂ ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ನಡೆಯುತ್ತಿದೆ ಭಾರೀ ಸಿದ್ಧತೆ

ಮಹಾರಾಷ್ಟ್ರ ನಕಲಿ ಮದ್ಯ ಸೇವನೆ ಪ್ರಕರಣ: 48ಗಂಟೆಯಲ್ಲಿ ಮೃತರ ಸಂಖ್ಯೆ 18ಕ್ಕೆ ಏರಿಕೆ

ಮುಂದಿನ ಸುದ್ದಿ
Show comments