ಮಾಲ್ಡೀವ್ಸ್‌ನತ್ತ ಸಚಿವ ಜೈಶಂಕರ್: ಉಭಯ ರಾಷ್ಟ್ರಗಳ ಸಂಬಂಧ ಇನ್ನಾದರೂ ಸರಿಹೋಗುತ್ತಾ

Sampriya
ಗುರುವಾರ, 8 ಆಗಸ್ಟ್ 2024 (19:53 IST)
Photo Courtesy
ನವದೆಹಲಿ: ಭಾರತ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರು ಮೂರು ದಿನಗಳ ಮಾಲ್ದೀವ್ಸ್ ಪ್ರವಾಸ ಕೈಗೊಳ್ಳುವ ಮೂಲಕ ಭಾರತ–ಮಾಲ್ಡೀವ್ಸ್‌ ಮುನಿಸಿಗೆ ವಿರಾಮ ಹಾಡಲಿದ್ದಾರೆ ಎಂದು ಕಾದು ನೋಡಬೇಕಿದೆ.

ಈಚೆಗೆ  ಮಾಲ್ದೀವ್ಸ್‌ನ ವಿದೇಶಾಂಗ ಸಚಿವ ಮೂಸಾ ಜಮೀರ್‌ ಅವರು ಭಾರತ ಪ್ರವಾಸ ಕೈಗೊಂಡು ಉಭಯ ರಾಷ್ಟ್ರಗಳ ಬಾಂಧವ್ಯ ಕುರಿತು ಚರ್ಚೆ ಮಾಡಿದ ಬೆನ್ನಲ್ಲೇ ಇದೀಗ ಜೈಶಂಕರ್ ಅವರು ಮಾಲ್ಡೀವ್ಸ್‌ಗೆ ಪ್ರವಾಸ ಕೈಗೊಂಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ವಿರುದ್ಧದ ಹೇಳಿಕೆ ನಂತರ ಭಾರತ ಹಾಗೂ ಮಾಲ್ದೀವ್ಸ್‌ ನಡುವಿನ ಜಗಳ ಜೋರಾಗುತ್ತಲೇ ಹೋಯಿತು. ಇದರ ಬಿಸಿಯಿಂದ ಮಾಲ್ಡೀವ್ಸ್‌ ಹೇಳಿಕೆ ನೀಡಿದ್ದ ಮೂರು ಸಚಿವರನ್ನು  ವಜಾಗೊಳಿಸಿತ್ತು. ಇದಾದ ಬೆನ್ನಲ್ಲೇ ಮಾಲ್ದೀವ್ಸ್‌ಗೆ ಪರ್ಯಾಯವಾಗಿ ಲಕ್ಷದ್ವೀಪವನ್ನು ದಕ್ಷಿಣ ಏಷ್ಯಾದ ಪ್ರವಾಸಿ ತಾಣವಾಗಿ ರೂಪಿಸುವ ನಿಟ್ಟಿನಲ್ಲಿ ಭಾರತ ಕ್ರಮ ಕೈಗೊಂಡಿತು. ಪ್ರಧಾನಿ ನರೇಂದ್ರ ಮೋದಿ ಅವರೂ ಭೇಟಿ ನೀಡಿದರು.

ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸಂದರ್ಭದಲ್ಲಿ ಮುಯಿಝು ಅವರಿಗೂ ಭಾರತ ಆಹ್ವಾನ ನೀಡಿತ್ತು. ಈ ಸಮಾರಂಭದಲ್ಲಿ ಮುಯಿಝು ಕಾರ್ಯಕ್ರಮದಲ್ಲಿ ಪಾಲ್ಗೊಂಡು, ನಂತರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆಯೋಜಿಸಿದ್ದ ಔತಣಕೂಟದಲ್ಲೂ ಪಾಲ್ಗೊಂಡಿದ್ದರು.

ಭಾರತದ ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಅವರೊಂದಿಗೂ ಮುಯಿಝು ಮಾತುಕತೆ ನಡೆಸಿ, ಉಭಯ ರಾಷ್ಟ್ರಗಳು ಒಗ್ಗೂಡಿ ಕಾರ್ಯನಿರ್ವಹಿಸಲು ಮುಂದೆ ಬಂದಿವೆ ಎಂದಿದ್ದರು. ಈ ಮೂಲಕ ಮತ್ತೇ ಭಾರತ ಮಾಲ್ಡೀವ್ಸ್‌ ಸಂಬಂಧ ಸರಿ ಹೋಗಬಹುದು ಎಂದು ನಿರೀಕ್ಷಿಸಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

ಸೂಸೈಡ್ ಬಾಂಬರ್ ದಾರಿ ತಪ್ಪಿದ ಮಗ: ಕಾಂಗ್ರೆಸ್ ಸಂಸದನ ಹೇಳಿಕೆ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments