ಸಚಿವೆ ಮೇನಕಾ ಗಾಂಧಿ ತೃತೀಯ ಲಿಂಗಿಗಳ ಬಳಿ ಕ್ಷಮೆ ಕೇಳಿದ್ಯಾಕೆ?

Webdunia
ಮಂಗಳವಾರ, 31 ಜುಲೈ 2018 (08:13 IST)
ನವದೆಹಲಿ : ಲೋಕಸಭೆಯಲ್ಲಿ ತೃತೀಯ ಲಿಂಗಿಗಳಿಗೆ 'ಇನ್ನೊಂದು' ಎಂಬ ಪದ ಬಳಕೆ ಮಾಡಿರುವುದಕ್ಕೆ ಕೇಂದ್ರ ಮಹಿಳೆ ಹಾಗೂ ಮಕ್ಕಳ ಅಭಿವೃದ್ಧಿ ಸಚಿವೆ ಮೇನಕಾ ಗಾಂಧಿ, ಸೋಮವಾರ ಟ್ವೀಟ್ ಮಾಡಿ ಕ್ಷಮೆಯಾಚಿಸಿದ್ದಾರೆ.


ಅಕ್ರಮವಾಗಿ ಮಾನವ ಸಾಗಾಣಿಕೆ ತಡೆಗಟ್ಟುವ ವಿಷಯವನ್ನು ಶಾಲಾ ಪಠ್ಯಪುಸ್ತಕಗಳಲ್ಲಿ ಸೇರಿಸಬೇಕು ಎನ್ನುವ ಕುರಿತು ಗುರುವಾರ ಲೋಕಸಭೆಯಲ್ಲಿ ಮಾತನಾಡುವ ಸಂದರ್ಭದಲ್ಲಿ ಮೇನಕಾ ಗಾಂಧಿ, ತೃತೀಯ ಲಿಂಗಿಗಳನ್ನು 'ಇನ್ನೊಂದು' ಎಂದು ಕರೆದಿದ್ದರು. ಈ ಬಗ್ಗೆ ತೃತೀಯ ಲಿಂಗಿ ಸಮುದಾಯಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಜನ ಚಳವಳಿ ಹಾಗೂ ತೃತೀಯ ಲಿಂಗಿ ಮಹಳೆಯ ರಾಷ್ಟ್ರೀಯ ಮೈತ್ರಿಯ ಸದಸ್ಯೆಯಾಗಿರುವ ಮೀರಾ ಸಂಘಮಿತ್ರ ಅವರು, ಮೇನಕಾ ಗಾಂಧಿ ಅವರು ಈ ವಿಚಾರವಾಗಿ ಕ್ಷಮೆ ಕೋರಬೇಕು ಎಂದು ಆಗ್ರಹಿಸಿದ್ದರು.


ಇದೀಗ ಈ ಬಗ್ಗೆ ಟ್ವೀಟ್ ಮಾಡಿರುವ ಮೇನಕಾ ಗಾಂಧಿ ಅವರು,’ ಲೋಕಸಭೆಯಲ್ಲಿ ಮಾನವ ಸಾಗಾಟ ಮಸೂದೆ 2018ರ ಕುರಿತು ಚರ್ಚೆ ನಡೆಸುತ್ತಿರುವಾಗ 'ಇನ್ನೊಂದು' ಎಂಬ ಪದ ಬಳಸಿರುವುದಕ್ಕೆ ನಾನು ಪ್ರಾಮಾಣಿಕವಾಗಿ ಕ್ಷಮೆ ಕೋರುತ್ತೇನೆ. ನಾನು ಅವರ ಬಗ್ಗೆ ನಕ್ಕಿದ್ದಲ್ಲ. ನನ್ನ ಅಜ್ಞಾನದ ಬಗ್ಗೆ ಮುಜುಗರವಾಗಿ ನಕ್ಕೆ. ತೃತೀಯ ಲಿಂಗಿ ಸಮುದಾಯಕ್ಕೆ ಅಧಿಕೃತವಾಗಿ ಯಾವ ಪದ ಬಳಕೆ ಮಾಡುತ್ತಾರೆ ಎಂಬ ಬಗ್ಗೆ ನನಗೆ ಅರಿವಿಲ್ಲ ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

ಸೂಸೈಡ್ ಬಾಂಬರ್ ದಾರಿ ತಪ್ಪಿದ ಮಗ: ಕಾಂಗ್ರೆಸ್ ಸಂಸದನ ಹೇಳಿಕೆ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments