Webdunia - Bharat's app for daily news and videos

Install App

ಟೆಸ್ಟ್‌ನಲ್ಲಿ ತುಂಬಾ ಮಿಸ್ ಮಾಡಿಕೊಂಡಿದ್ದೇನೆ, ವಿರಾಟ್‌ ದೇಶಕ್ಕೆ ನಿಮ್ಮ ಅವಶ್ಯಕತೆಯಿದೆ: ಶಶಿ ತರೂರ್ ಪೋಸ್ಟ್‌

Sampriya
ಸೋಮವಾರ, 4 ಆಗಸ್ಟ್ 2025 (19:06 IST)
Photo Credit X
ನವದೆಹಲಿ: ನಡೆಯುತ್ತಿರುವ ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿಯ ವೇಳೆ  ವಿರಾಟ್ ಕೊಹ್ಲಿಯನ್ನು ತುಂಬಾ ಮಿಸ್ ಮಾಡಿಕೊಂಡಿದ್ದೇನೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಶಶಿ ತರೂರ್ ಅವರು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ. 

ಇದು ಓವಲ್‌ನಲ್ಲಿ ನಡೆದ ಐದನೇ ಮತ್ತು ಅಂತಿಮ ಪಂದ್ಯಾಟದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ಐತಿಹಾಸಿಕ ಗೆಲುಸು ಸಾಧಿಸಿದ ಬೆನ್ನಲ್ಲೇ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ. 

ತಮ್ಮ ಪೋಸ್ಟ್‌ನಲ್ಲಿ, ತರೂರ್ ಅವರು ಕೊಹ್ಲಿಯ ಅನುಪಸ್ಥಿತಿ ಬಗ್ಗೆ ಹೇಳಿಕೊಂಡಿದ್ದಾರೆ. 

ಈ ಸರಣಿಯಲ್ಲಿ ವಿರಾಟ್ ಕೊಹ್ಲಿ ಅವರನ್ನು ಹಲವು ಬಾರಿ ಮಿಸ್ ಮಾಡಿಕೊಂಡಿದ್ದೇನೆ. ಅದರಲ್ಲೂ, ಈ (ಅಂತಿಮ) ಟೆಸ್ಟ್‌ ಪಂದ್ಯದ ವೇಳೆ ಮಿಸ್‌ ಮಾಡಿಕೊಂಡಷ್ಟು ಯಾವಾಗಲೂ ಮಿಸ್‌ ಮಾಡಿಕೊಂಡಿರಲಿಲ್ಲ. ಅವರ ಎದೆಗಾರಿಕೆ, ಆಟದ ತೀವ್ರತೆ, ಅವರ ಸ್ಫೂರ್ತಿದಾಯಕ ಉಪಸ್ಥಿತಿ, ಅಪಾರವಾದ ಬ್ಯಾಟಿಂಗ್ ಕೌಶಲಕ್ಕೆ ಫಲಿತಾಂಶವನ್ನೇ ಬದಲಿಸಬಲ್ಲ ತಾಕತ್ತು ಇತ್ತು. ಅವರು ತಮ್ಮ ನಿವೃತ್ತಿ ನಿರ್ಧಾರವನ್ನು ಹಿಂಪಡೆಯಲು ತಡವಾಯಿತೇ? ವಿರಾಟ್‌, ದೇಶಕ್ಕೆ ನಿಮ್ಮ ಅವಶ್ಯಕತೆ ಇದೆ!' ಎಂದು ಬರೆದುಕೊಂಡಿದ್ದಾರೆ. 

ಸದ್ಯ ಇಂಗ್ಲೆಂಡ್‌ನಲ್ಲಿ ನಡೆಯುತ್ತಿರುವ 'ಆ್ಯಂಡರ್ಸನ್‌–ತೆಂಡೂಲ್ಕರ್‌ ಟ್ರೋಫಿ' ಟೆಸ್ಟ್‌ ಸರಣಿ ಆರಂಭಕ್ಕೆ ಕೆಲವೇ ದಿನಗಳಿದ್ದಾಗ ಕೊಹ್ಲಿ, ಟೆಸ್ಟ್‌ ಮಾದರಿಗೆ ವಿದಾಯ ಹೇಳಿದ್ದರು. 

ಅದಕ್ಕೂ ಮೊದಲು, ರೋಹಿತ್‌ ಶರ್ಮಾ ಅವರೂ ನಿವೃತ್ತಿ ಘೋಷಿಸಿದ್ದರು. ಹೀಗಾಗಿ, ಯುವ ನಾಯಕ ಶುಭಮನ್‌ ಗಿಲ್‌ ಅವರು ಟೀಂ ಇಂಡಿಯಾವನ್ನು ಮುನ್ನಡೆಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಡಿಗೇಶಿ ಬಳಿ 19 ನವಿಲುಗಳ ಸಾವು: ಎಚ್ಚೆತ್ತ ಸರ್ಕಾರದಿಂದ ದಿಟ್ಟ ನಿರ್ಧಾರ

ಟೆಸ್ಟ್‌ನಲ್ಲಿ ತುಂಬಾ ಮಿಸ್ ಮಾಡಿಕೊಂಡಿದ್ದೇನೆ, ವಿರಾಟ್‌ ದೇಶಕ್ಕೆ ನಿಮ್ಮ ಅವಶ್ಯಕತೆಯಿದೆ: ಶಶಿ ತರೂರ್ ಪೋಸ್ಟ್‌

ನೇಹಾ ಹಿರೇಮಠ ಹತ್ಯೆ ಸಂಬಂಧ: ಆರೋಪಿಗೆ ಫಯಾಜ್ ಬಿಗ್ ಶಾಕ್

ಧರ್ಮಸ್ಥಳ ಅಸ್ಥಿ ಉತ್ಖನನ: ದೂರುದಾರ ಗುರುತಿಸಿದ 11ನೇ ಪಾಯಿಂಟ್‌ನಲ್ಲಿ ಬಿಗ್‌ಟ್ವಿಸ್ಟ್‌

ಮೈಸೂರಿನತ್ತ ಹೆಜ್ಜೆ ಹಾಕಿದ ಅಭಿಮನ್ಯ ನೇತೃತ್ವದ 9 ಗಜಪಡೆ

ಮುಂದಿನ ಸುದ್ದಿ
Show comments