Webdunia - Bharat's app for daily news and videos

Install App

ಸ್ನಾನಕ್ಕೆಂದು ಹೋದ ಎಂಜಿನಿಯರಿಂಗ್ ವಿದ್ಯಾರ್ಥಿಗಳು ನಾಪತ್ತೆ?

Webdunia
ಶನಿವಾರ, 30 ಜುಲೈ 2022 (16:05 IST)
ಹೈದರಾಬಾದ್ : ಅನಕಾಪಲ್ಲಿಯ DIET ಎಂಜಿನಿಯರಿಂಗ್ ಕಾಲೇಜಿನ ಏಳು ಮಂದಿ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಆಂಧ್ರಪ್ರದೇಶದ ಪುಡಿಮಡಕ ಬೀಚ್ನಲ್ಲಿ ನಾಪತ್ತೆಯಾಗಿದ್ದಾರೆ.

ಶುಕ್ರವಾರ ಪೊಲೀಸರು ಇಬ್ಬರು ವಿದ್ಯಾರ್ಥಿಗಳನ್ನು ಪತ್ತೆ ಹಚ್ಚಿದ್ದು, ಅವರಲ್ಲಿ ಪವನ್ ಕುಮಾರ್ ಎಂಬ ಯುವಕ ಶವವಾಗಿ ಪತ್ತೆಯಾಗಿದ್ದು, ಮತ್ತೋರ್ವ ತೇಜ ಅವರ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಸ್ನಾನ ಮಾಡಲೆಂದು ಏಳು ಮಂದಿ ವಿದ್ಯಾರ್ಥಿಗಳು ಸಮುದ್ರಕ್ಕೆ ಇಳಿದಿದ್ದರು. ಈ ವೇಳೆ ಜೋರಾಗಿ ಬಂದ ಅಲೆ ಅವರನ್ನು ಎಳೆದೊಯ್ದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಇದೀಗ ಶನಿವಾರ ರಕ್ಷಣಾ ಅಧಿಕಾರಿಗಳು ಮತ್ತಿಬ್ಬರು ವಿದ್ಯಾರ್ಥಿಗಳ ಮೃತ ದೇಹಗಳನ್ನು ಹೊರತೆಗೆದಿದ್ದಾರೆ. ಮೃತರನ್ನು ಜಸ್ವಂತ್ ಕುಮಾರ್ ಮತ್ತು ಪೆಂಟಕೋಟ ಗಣೇಶ್ ಎಂದು ಗುರುತಿಸಲಾಗಿದೆ.

ಉಳಿದ ಮೂವರು ವಿದ್ಯಾರ್ಥಿಗಳಾದ ಕಂಪಾರ ಜಗದೀಶ್, ಬಯ್ಯಪುನೇನಿ ಸತೀಶ್ ಕುಮಾರ್ ಮತ್ತು ಪುಡಿ ರಾಮಚಂದು ಅವರನ್ನು ಹುಡುಕಲು ಹೆಲಿಕಾಪ್ಟರ್ ಮತ್ತು ಕೋಸ್ಟ್ ಗಾರ್ಡ್ ಬೋಟ್ಗಳನ್ನು ನಿಯೋಜಿಸಲಾಗಿದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೋಲ್ಕತ್ತಾ ಮೆಟ್ರೋದಲ್ಲಿ ಹೊಡೆದಾಡಿಕೊಳ್ಳುತ್ತಿದ್ದ ಮಹಿಳೆಯರನ್ನು ಬಿಡಿಸಲು ಹೋದ ಆರ್‌ಪಿಎಫ್‌ಗೆ ಹೇಗೆ ಹೊಡೆದ್ರು ನೋಡಿ

ಭಾರೀ ಸುದ್ದಿಯಾಗಿದ್ದ ಭಾರತದ ಅರಣ್ಯದಲ್ಲಿ ಒರಾಂಗುಟಾನ್ ಮರಿಗಳ ಪತ್ತೆ, ಮಹತ್ವದ ಬೆಳವಣಿಗೆ

ರಾಜಕೀಯ ಅಸ್ತ್ರವಾದ '80s AI ಫೋಟೋ ಟ್ರೆಂಡ್': ಕಾಂಗ್ರೇಸ್ ಬಿಜೆಪಿ ನಡುವೆ ಪೋಸ್ಟರ್ ವಾರ್

ರಸ್ತೆಯಲ್ಲಿ ಕಾದಾಟುತ್ತಿದ್ದ ಹೋರಿಗಳು ಅಂಗಡಿಯೊಳಗೆ ನುಗ್ಗಿದ್ದರಿಂದ ಲಕ್ಷಾಂತರ ಮೌಲ್ಯದ ವಸ್ತುಗಳು ಜಖಂ, Video

ತರಗತಿಯಲ್ಲಿ ಕೂರುವ ಸ್ಥಳದ ವಿಚಾರವಾಗಿ ಕ್ಲಾಸ್‌ಮೇಟ್‌ಗಳ ನಡುವೆ ಹೇಗೆ ಜಗಳ ನಡೆಯಿತು ನೋಡಿ

ಮುಂದಿನ ಸುದ್ದಿ
Show comments