Webdunia - Bharat's app for daily news and videos

Install App

ಬಿಜೆಪಿ ಅಧಿಕಾರಕ್ಕೆ ಬಾರದಂತೆ ತಡೆಯುವುದೇ ನಮ್ಮ ಗುರಿ: ಸ್ಟಾಲಿನ್

Krishnaveni K
ಶನಿವಾರ, 27 ಜನವರಿ 2024 (10:54 IST)
ಚೆನ್ನೈ: ದೇಶದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬಾರದಂತೆ ತಡೆಯುವುದೇ ನಮ್ಮ ಗುರಿಯಾಗಬೇಕು ಎಂದು ತಮಿಳುನಾಡು ಸಿಎಂ, ಡಿಎಂಕೆ ನಾಯಕ ಸ್ಟಾಲಿನ್ ಹೇಳಿದ್ದಾರೆ.

ತಿರುಚಿನಾಪಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸ್ಟಾಲಿನ್,  ಈ ದೇಶದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬಾರದಂತೆ ತಡೆಯುವುದೇ ನಮ್ಮ ಗುರಿಯಾಗಬೇಕು. ಇದಕ್ಕಾಗಿ ಮತಗಳು ವಿಭಜನೆಯಾಗದಂತೆ ನೋಡಿಕೊಳ್ಳಬೇಕು ಎಂದಿದ್ದಾರೆ.

ಪ್ರತಿಯೊಬ್ಬರಿಗೂ ಒಂದು ಗುರಿ ಇರಬೇಕು. ಅದು ಬಿಜೆಪಿ ಸೋಲಿಸುವುದು ಆಗಿರಬೇಕು. ದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಪ್ರಜಾಪ್ರಭುತ್ವ ಉಳಿಯಲ್ಲ ಎಂದು ಸ್ಟಾಲಿನ್ ಕರೆ ಕೊಟ್ಟಿದ್ದಾರೆ. ಬಿಜೆಪಿ ವಿರುದ್ಧವಾಗಿ ಕಾಂಗ್ರೆಸ್ ನೇತೃತ್ವದಲ್ಲಿ ವಿಪಕ್ಷಗಳು ಇಂಡಿಯಾ ಎಂಬ ಒಕ್ಕೂಟ ಮಾಡಿಕೊಂಡಿದೆ.

ಆದರೆ ಸೀಟು ಹಂಚಿಕೆ ವಿಚಾರದಲ್ಲಿ ಈ ಒಕ್ಕೂಟದಲ್ಲೇ ಭಿನ್ನಾಭಿಪ್ರಾಯ ಮೂಡಿದೆ. ಇತ್ತೀಚೆಗೆ ಪಶ್ಚಿಮ ಬಂಗಾಲ ಸಿಎಂ ಮಮತಾ ಬ್ಯಾನರ್ಜಿ, ಪಂಜಾಬ್ ನಲ್ಲಿ ಆಪ್ ಪಕ್ಷ ಲೋಕಸಭೆ ಚುನಾವಣೆಗೆ ತಮ್ಮ ಪಕ್ಷ ಈ ರಾಜ್ಯಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದಿದ್ದರು.

ವಿಪಕ್ಷಗಳ ಒಕ್ಕೂಟದಲ್ಲಿ ಈ ರೀತಿಯ ಭಿನ್ನಾಭಿಪ್ರಾಯಗಳಿಂದ ಮತ ವಿಭಜನೆಯಾಗಲಿದೆ. ಇದು ಬಿಜೆಪಿಗೆ ಲಾಭವಾಗಲಿದೆ. ಈ ಕಾರಣಕ್ಕೇ ಸ್ಟಾಲಿನ್ ಈ ರೀತಿ ಕರೆಕೊಟ್ಟಿದ್ದಾರೆ. ಡಿಎಂಕೆ ಕೂಡಾ ಇಂಡಿಯಾ ಒಕ್ಕೂಟಕ್ಕೆ ಬೆಂಬಲ ನೀಡುತ್ತಿದೆ. ತಮಿಳುನಾಡಿನಲ್ಲಿ ಇತ್ತೀಚೆಗೆ ಬಿಜೆಪಿ ಚಿಗುರೊಡೆಯುತ್ತಿದೆ. ಹೀಗಾಗಿ ಸ್ಟಾಲಿನ್ ಈ ಹೇಳಿಕೆ ಮಹತ್ವ ಪಡೆದುಕೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments