Select Your Language

Notifications

webdunia
webdunia
webdunia
webdunia

ಬಿಹಾರ್: ಅಜಯ್ ದೇವಗನ್ ಚುನಾವಣಾ ಪ್ರಚಾರದಲ್ಲಿ ಹಿಂಸಾಚಾರ

ಬಿಹಾರ್: ಅಜಯ್ ದೇವಗನ್ ಚುನಾವಣಾ ಪ್ರಚಾರದಲ್ಲಿ ಹಿಂಸಾಚಾರ
ಬಿಹಾರ್ ಷರೀಫ್ , ಮಂಗಳವಾರ, 13 ಅಕ್ಟೋಬರ್ 2015 (16:58 IST)
ಬಿಜೆಪಿ ಅಭ್ಯರ್ಥಿ ಸುನೀಲ್‌ಕುಮಾರ್ ಪರವಾಗಿ ಚುನಾವಣೆ ಪ್ರಚಾರಕ್ಕೆ ಬಾಲಿವುಡ್ ನಟ ಅಜಯ್ ದೇವಗನ್ ವಿಳಂಬವಾಗಿ ಆಗಮಿಸಿದ ಹಿನ್ನೆಲೆಯಲ್ಲಿ, ರೊಚ್ಚಿಗೆದ್ದ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದರಿಂದ ಪೊಲೀಸರು ಸೇರಿದಂತೆ 12 ಮಂದಿ ಗಾಯಗೊಂಡಿದ್ದಾರೆ.
 
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿವೇಕಾನಂದ್ ಕುಮಾರ್ ಮಾತನಾಡಿ, ಇಂದು ಬೆಳಿಗ್ಗೆ 10.30 ಗಂಟೆಗೆ ನಟ ಅಜಯ್ ದೇವಗನ್ ಬಿಜೆಪಿ ಅಭ್ಯರ್ಥಿಯ ಪರವಾಗಿ ಪ್ರಚಾರ ಮಾಡಲು ಆಗಮಿಸುವವರಿದ್ದರು. ಆದರೆ, ಕೊನೆಗೂ 1 ಗಂಟೆಗೆ ದೇವಗನ್ ಆಗಮಿಸಿದ್ದರೂ ರೊಚ್ಚಿಗೆದ್ದ ಸಾವಿರಾರು ಜನರು ತಾಳ್ಮೆ ಕಳೆದುಕೊಂಡು ಹಿಂಸಾಚಾರ ನಡೆಸಿದರು ಎಂದು ತಿಳಿಸಿದ್ದಾರೆ.
 
ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಕಾರ್ಯಕರ್ತರು ಕಾರ್ಯಕ್ರಮಕ್ಕಾಗಿ ಹಾಕಲಾಗಿದ್ದ ಕುರ್ಚಿಗಳನ್ನು ಮತ್ತು ಕಲ್ಲುಗಳನ್ನು ಪೊಲೀಸರತ್ತ ತೂರಿದರು. ಪೊಲೀಸರು ಲಾಠಿಚಾರ್ಜ್ ನಡೆಸಿದಾಗ ಹಲವರು ಗಾಯಗೊಂಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.   
 
ಸಾರ್ವಜನಿಕ ಸಭೆ ಹಿಂಸಾಚಾರಕ್ಕೆ ತಿರುಗಿದ ಪರಿಣಾಮವಾಗಿ ಅಜಯ್ ದೇವಗನ್ ಹೆಲಿಕಾಪ್ಟರ್‌ನಿಂದ ಕೆಳಗಿಳಿಯದೆ ಹಾಗೇ ವಾಪಸ್ ಮರಳಿದರು. ಲಖಿ ಸರಾಯಿ ಮತ್ತು ಖಗರಿಯಾ ಜಿಲ್ಲೆಗಳಲ್ಲೂ ದೇವಗನ್ ಪಾಲ್ಗೊಂಡಿದ್ದ ಸಭೆಗಳಲ್ಲಿ ಹಿಂಸಾಚಾರ ನಡೆದಿದ್ದವು ಎಂದು ತಿಳಿಸಿದ್ದಾರೆ. 
 
ಬಿಹಾರ್ ಷರೀಫ್ ವಿಧಾನಸಭೆ ಕ್ಷೇತ್ರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ತವರೂರಾಗಿದೆ. ಜೆಡಿಯು ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದ ಸುನೀಲ್ ಕುಮಾರ್‌ಗೆ ಬಿಜೆಪಿ ಟಿಕೆಟ್ ನೀಡಿದೆ 

Share this Story:

Follow Webdunia kannada