Webdunia - Bharat's app for daily news and videos

Install App

ಬಿಹಾರ್: ಅಜಯ್ ದೇವಗನ್ ಚುನಾವಣಾ ಪ್ರಚಾರದಲ್ಲಿ ಹಿಂಸಾಚಾರ

Webdunia
ಮಂಗಳವಾರ, 13 ಅಕ್ಟೋಬರ್ 2015 (16:58 IST)
ಬಿಜೆಪಿ ಅಭ್ಯರ್ಥಿ ಸುನೀಲ್‌ಕುಮಾರ್ ಪರವಾಗಿ ಚುನಾವಣೆ ಪ್ರಚಾರಕ್ಕೆ ಬಾಲಿವುಡ್ ನಟ ಅಜಯ್ ದೇವಗನ್ ವಿಳಂಬವಾಗಿ ಆಗಮಿಸಿದ ಹಿನ್ನೆಲೆಯಲ್ಲಿ, ರೊಚ್ಚಿಗೆದ್ದ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದರಿಂದ ಪೊಲೀಸರು ಸೇರಿದಂತೆ 12 ಮಂದಿ ಗಾಯಗೊಂಡಿದ್ದಾರೆ.
 
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿವೇಕಾನಂದ್ ಕುಮಾರ್ ಮಾತನಾಡಿ, ಇಂದು ಬೆಳಿಗ್ಗೆ 10.30 ಗಂಟೆಗೆ ನಟ ಅಜಯ್ ದೇವಗನ್ ಬಿಜೆಪಿ ಅಭ್ಯರ್ಥಿಯ ಪರವಾಗಿ ಪ್ರಚಾರ ಮಾಡಲು ಆಗಮಿಸುವವರಿದ್ದರು. ಆದರೆ, ಕೊನೆಗೂ 1 ಗಂಟೆಗೆ ದೇವಗನ್ ಆಗಮಿಸಿದ್ದರೂ ರೊಚ್ಚಿಗೆದ್ದ ಸಾವಿರಾರು ಜನರು ತಾಳ್ಮೆ ಕಳೆದುಕೊಂಡು ಹಿಂಸಾಚಾರ ನಡೆಸಿದರು ಎಂದು ತಿಳಿಸಿದ್ದಾರೆ.
 
ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಕಾರ್ಯಕರ್ತರು ಕಾರ್ಯಕ್ರಮಕ್ಕಾಗಿ ಹಾಕಲಾಗಿದ್ದ ಕುರ್ಚಿಗಳನ್ನು ಮತ್ತು ಕಲ್ಲುಗಳನ್ನು ಪೊಲೀಸರತ್ತ ತೂರಿದರು. ಪೊಲೀಸರು ಲಾಠಿಚಾರ್ಜ್ ನಡೆಸಿದಾಗ ಹಲವರು ಗಾಯಗೊಂಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.   
 
ಸಾರ್ವಜನಿಕ ಸಭೆ ಹಿಂಸಾಚಾರಕ್ಕೆ ತಿರುಗಿದ ಪರಿಣಾಮವಾಗಿ ಅಜಯ್ ದೇವಗನ್ ಹೆಲಿಕಾಪ್ಟರ್‌ನಿಂದ ಕೆಳಗಿಳಿಯದೆ ಹಾಗೇ ವಾಪಸ್ ಮರಳಿದರು. ಲಖಿ ಸರಾಯಿ ಮತ್ತು ಖಗರಿಯಾ ಜಿಲ್ಲೆಗಳಲ್ಲೂ ದೇವಗನ್ ಪಾಲ್ಗೊಂಡಿದ್ದ ಸಭೆಗಳಲ್ಲಿ ಹಿಂಸಾಚಾರ ನಡೆದಿದ್ದವು ಎಂದು ತಿಳಿಸಿದ್ದಾರೆ. 
 
ಬಿಹಾರ್ ಷರೀಫ್ ವಿಧಾನಸಭೆ ಕ್ಷೇತ್ರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ತವರೂರಾಗಿದೆ. ಜೆಡಿಯು ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದ ಸುನೀಲ್ ಕುಮಾರ್‌ಗೆ ಬಿಜೆಪಿ ಟಿಕೆಟ್ ನೀಡಿದೆ 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments