Select Your Language

Notifications

webdunia
webdunia
webdunia
webdunia

ಮಾಡಾಳ್ ಜಾಮೀನಿ : ತುರ್ತು ವಿಚಾರಣೆಗೆ ಸುಪ್ರೀಂ ನಕಾರ

ಮಾಡಾಳ್ ಜಾಮೀನಿ : ತುರ್ತು ವಿಚಾರಣೆಗೆ ಸುಪ್ರೀಂ ನಕಾರ
ನವದೆಹಲಿ , ಬುಧವಾರ, 15 ಮಾರ್ಚ್ 2023 (08:08 IST)
ನವದೆಹಲಿ : ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಮಧ್ಯಂತರ ಜಾಮೀನು ನೀಡಿದ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಲೋಕಾಯುಕ್ತ ಅರ್ಜಿ ಸಲ್ಲಿಸಿದೆ. ಅರ್ಜಿಯನ್ನು ತುರ್ತು ವಿಚಾರಣೆ ನಡೆಸುವಂತೆ ಎರಡು ಬಾರಿ ವಕೀಲರು ಮಂಗಳವಾರ ಮನವಿ ಮಾಡಿದರು.
 
ಲೋಕಾಯುಕ್ತ ಪರ ವಕೀಲರು ಮೊದಲು ಸಿಜೆಐ ಡಿ.ವೈ ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠದ ಮುಂದೆ ಪ್ರಸ್ತಾಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಜೆಐ, ಸಾಂವಿಧಾನಿಕ ಪೀಠದಲ್ಲಿ ಭಾಗಿಯಾಗುತ್ತಿದ್ದು ತುರ್ತು ವಿಚಾರಣೆ ಸಾಧ್ಯವಿಲ್ಲ,

ಕಲಾಪ ಅಂತ್ಯದ ವೇಳೆ ವಿಚಾರಣೆ ನಡೆಸುತ್ತೇವೆ ಎಂದು ಹೇಳಿದರು. ಒಂದು ವೇಳೆ ತುರ್ತು ವಿಚಾರಣೆಯ ಅಗತ್ಯವಿದ್ದಲ್ಲಿ ನ್ಯಾ. ಸಂಜಯ್ ಕಿಶನ್ ಕೌಲ್ ಪೀಠದಲ್ಲಿ ಪ್ರಸ್ತಾಪಿಸಲು ಸೂಚನೆ ನೀಡಿದರು.

ಸಿಜೆಐ ಸೂಚನೆ ಮೇರೆಗೆ ನ್ಯಾ. ಸಂಜಯ್ ಕಿಶನ್ ಕೌಲ್ ಪೀಠದ ಮುಂದೆ ಲೋಕಾಯುಕ್ತ ಪರ ವಕೀಲರು ತುರ್ತು ವಿಚಾರಣೆಗೆ ಮನವಿ ಮಾಡಿದರು. ಆದರೆ ನ್ಯಾ. ಕೌಲ್ ತುರ್ತು ವಿಚಾರಣೆ ನಡೆಸಲು ನಿರಾಕರಿಸಿದರು. ಅರ್ಜಿಯಲ್ಲಿ ತುರ್ತು ವಿಚಾರಣೆ ಮಾಡುವಂತದ್ದು ಏನಿದೆ? ಮಧ್ಯಂತರ ಜಾಮೀನು ರದ್ದುಗೊಳಿಸಬೇಕಾ? ಹೈಕೋರ್ಟ್ ತನ್ನ ವಿವೇಚನೆಯಲ್ಲಿ ಜಾಮೀನು ನೀಡಿದೆ ಎಂದರು.

Share this Story:

Follow Webdunia kannada

ಮುಂದಿನ ಸುದ್ದಿ

ಸುಪ್ರೀಂ ಕೋರ್ಟ್ನಲ್ಲಿ ಕೇಂದ್ರಕ್ಕೆ ಭಾರೀ ಹಿನ್ನಡೆ