Webdunia - Bharat's app for daily news and videos

Install App

ಮಾಡಾಳ್ ಜಾಮೀನಿ : ತುರ್ತು ವಿಚಾರಣೆಗೆ ಸುಪ್ರೀಂ ನಕಾರ

Webdunia
ಬುಧವಾರ, 15 ಮಾರ್ಚ್ 2023 (08:08 IST)
ನವದೆಹಲಿ : ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಮಧ್ಯಂತರ ಜಾಮೀನು ನೀಡಿದ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಲೋಕಾಯುಕ್ತ ಅರ್ಜಿ ಸಲ್ಲಿಸಿದೆ. ಅರ್ಜಿಯನ್ನು ತುರ್ತು ವಿಚಾರಣೆ ನಡೆಸುವಂತೆ ಎರಡು ಬಾರಿ ವಕೀಲರು ಮಂಗಳವಾರ ಮನವಿ ಮಾಡಿದರು.
 
ಲೋಕಾಯುಕ್ತ ಪರ ವಕೀಲರು ಮೊದಲು ಸಿಜೆಐ ಡಿ.ವೈ ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠದ ಮುಂದೆ ಪ್ರಸ್ತಾಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಜೆಐ, ಸಾಂವಿಧಾನಿಕ ಪೀಠದಲ್ಲಿ ಭಾಗಿಯಾಗುತ್ತಿದ್ದು ತುರ್ತು ವಿಚಾರಣೆ ಸಾಧ್ಯವಿಲ್ಲ,

ಕಲಾಪ ಅಂತ್ಯದ ವೇಳೆ ವಿಚಾರಣೆ ನಡೆಸುತ್ತೇವೆ ಎಂದು ಹೇಳಿದರು. ಒಂದು ವೇಳೆ ತುರ್ತು ವಿಚಾರಣೆಯ ಅಗತ್ಯವಿದ್ದಲ್ಲಿ ನ್ಯಾ. ಸಂಜಯ್ ಕಿಶನ್ ಕೌಲ್ ಪೀಠದಲ್ಲಿ ಪ್ರಸ್ತಾಪಿಸಲು ಸೂಚನೆ ನೀಡಿದರು.

ಸಿಜೆಐ ಸೂಚನೆ ಮೇರೆಗೆ ನ್ಯಾ. ಸಂಜಯ್ ಕಿಶನ್ ಕೌಲ್ ಪೀಠದ ಮುಂದೆ ಲೋಕಾಯುಕ್ತ ಪರ ವಕೀಲರು ತುರ್ತು ವಿಚಾರಣೆಗೆ ಮನವಿ ಮಾಡಿದರು. ಆದರೆ ನ್ಯಾ. ಕೌಲ್ ತುರ್ತು ವಿಚಾರಣೆ ನಡೆಸಲು ನಿರಾಕರಿಸಿದರು. ಅರ್ಜಿಯಲ್ಲಿ ತುರ್ತು ವಿಚಾರಣೆ ಮಾಡುವಂತದ್ದು ಏನಿದೆ? ಮಧ್ಯಂತರ ಜಾಮೀನು ರದ್ದುಗೊಳಿಸಬೇಕಾ? ಹೈಕೋರ್ಟ್ ತನ್ನ ವಿವೇಚನೆಯಲ್ಲಿ ಜಾಮೀನು ನೀಡಿದೆ ಎಂದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments