Webdunia - Bharat's app for daily news and videos

Install App

ಮೋದಿ ವಿಶ್ವಯಾತ್ರೆಯಲ್ಲಿ ಬ್ಯುಸಿ: ರಾಹುಲ್ ಗಾಂಧಿ

Webdunia
ಗುರುವಾರ, 15 ಸೆಪ್ಟಂಬರ್ 2016 (17:29 IST)
ದೇಶದಲ್ಲಿ ರೈತರು ಹೇಳಲಾರದಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದರೆ, ಪ್ರಧಾನಿ ಮೋದಿ ವಿಶ್ವಯಾತ್ರೆಯಲ್ಲಿ ವ್ಯಸ್ತರಾಗಿದ್ದಾರೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಟೀಕಿಸಿದ್ದಾರೆ. 

ಉತ್ತರ ಪ್ರದೇಶದಲ್ಲಿ ತಾವು ನಡೆಸುತ್ತಿರುವ ಕಿಸಾನ್ ಯಾತ್ರಾದ ಏಳನೆಯ ದಿನ ಮಿರ್ಜಾಪುರದಲ್ಲಿ ಮಾತನಾಡುತ್ತಿದ್ದ ಕಾಂಗ್ರೆಸ್ ನಾಯಕ, ಮೋದಿ ವಿರುದ್ಧ ಕಿಡಿಕಾರಿದ್ದಾರೆ. ಮೋದಿ ಅವರು ಉದ್ಯಮಪತಿಗಳ 1.10 ಲಕ್ಷ ಕೋಟಿ ಸಾಲಮನ್ನಾ ಮಾಡಿದರು. ಆದರೆ ನಾವು ಉತ್ತರ ಪ್ರದೇಶದಲ್ಲಿ ಅಧಿಕಾರಕ್ಕೇರಿದರೆ 10 ದಿನಗಳೊಳಗೆ ರೈತರ ಸಾಲ ಮನ್ನಾ ಮಾಡುತ್ತೇವೆ ಎಂದು ಅವರು ಭರವಸೆ ನೀಡಿದ್ದಾರೆ. 
 
ನನ್ನ ಘೋಷಣೆ, 'ಸಾಲ ಮನ್ನಾ, ವಿದ್ಯುತ್ ಬಿಲ್ ಅರ್ಧ ಮನ್ನಾ 'ಎಂದು ಅವರು ಹೇಳಿದರು. 
 
ಜನರನ್ನು ಓಲೈಸಲು ಪ್ರಯತ್ನಿಸಿದ ಅವರು ನಾನು ಇಲ್ಲಿ ನಿಮ್ಮಿಂದ ಕಲಿಯ ಬಂದಿದ್ದೇನೆ, ಹೊರತು ಉಪನ್ಯಾಸ ನೀಡಲು ಅಲ್ಲ ಎಂದರು. 
 
ಡಿಯೋರಿಯಾದಲ್ಲಿ ಪ್ರಾರಂಭವಾದ ಈ ಕಿಸಾನ್ ಯಾತ್ರೆ ನವದೆಹಲಿಯಲ್ಲಿ ಕೊನೆಗೊಳ್ಳಲಿದೆ. 
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments