ಮೋದಿ ಸಂಪುಟ ಪುನಾರಚನೆ: ಮೂವರು ಸಚಿವರಿಗೆ ಕೊಕ್?

Webdunia
ಬುಧವಾರ, 18 ಮೇ 2016 (14:56 IST)
ಪ್ರಧಾನಮಂತ್ರಿ ನರೇಂದ್ರ ಮೋದಿ ಸಚಿವ ಸಂಪುಟ ಪುನಾರಚನೆ ಮಾಡಲಿದ್ದು, ಆರೋಗ್ಯ ಸಚಿವ ಜೆಪಿ ನಡ್ಡಾ, ಪರಿಸರ ಖಾತೆ ಸಚಿವ ಪ್ರಕಾಶ್ ಜಾವ್ಡೇಕರ್, ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಖಾತೆ ಸಚಿವ ಗಿರಿರಾಜ್ ಸಿಂಗ್ ಅವರನ್ನು ಸಂಪುಟದಿಂದ ಕೈಬಿಡುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.
 
ಆಸ್ಸಾಂ ರಾಜ್ಯದ ವಿಧಾನಸಭೆ ಚುನಾವಣೆ ಫಲಿತಾಂಶ ಕೂಡಾ ಸಂಪುಟ ಪುನಾರಚನೆಗೆ ಪ್ರೇರಣೆಯಾಗಿದೆ ಎಂದು ಅನಾಮಧೇಯ ನಾಯಕರು ತಿಳಿಸಿದ್ದಾರೆ.
 
ಆಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು ಕೇರಳ ಮತ್ತು ಪುದುಚೇರಿ ವಿಧಾನಸಭೆಗಳ ಚುನಾವಣೆ ಫಲಿತಾಂಶ ಗುರುವಾರದಂದು ಪ್ರಕಟವಾಗಲಿದೆ. ಸಚಿವರಾದ ನಡ್ಡಾ, ಜಾವ್ಡೇಕರ್ ಮತ್ತು ಗಿರಿರಾಜ್ ಸಿಂಗ್ ಅವರನ್ನು ಪಕ್ಷದ ಸಂಘಟನೆಗಾಗಿ ಬಳಸಿಕೊಳ್ಳಲಾಗುವುದು ಎಂದು ವರದಿಯಲ್ಲಿ ತಿಳಿಸಲಾಗಿದೆ. 
 
ಒಂದು ವೇಳೆ, ಚುನಾವಣೋತ್ತರ ಸಮೀಕ್ಷೆಯಂತೆ ಆಸ್ಸಾಂ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಲ್ಲಿ ಕೇಂದ್ರ ಕ್ರೀಡಾ ಸಚಿವ ಸರ್ಬಾನಂದ್ ಸೋನೋವಾಲ್ ಮುಖ್ಯಮಂತ್ರಿಯಾಗಲಿದ್ದಾರೆ. ಅವರ ಖಾಲಿ ಸ್ಛಾನವನ್ನು ಮತ್ತೆ ತುಂಬಬೇಕಾಗುತ್ತದೆ. 
 
ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರಕಾರ ಎರಡು ವರ್ಷಗಳ ಅವಧಿಯನ್ನು ಮುಂದಿನ ವಾರ ಪೂರ್ಣಗೊಳಿಸಲಿದ್ದು, ಚುನಾವಣೆ ಸಂದರ್ಭದಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುವ ಒತ್ತಡವನ್ನು ಎದುರಿಸುತ್ತಿದೆ.
 
ವರದಿಗಳ ಪ್ರಕಾರ ಕೇಂದ್ರ ಆರೋಗ್ಯ ಸಚಿವ ನಡ್ಡಾ ಕಾರ್ಯನಿರ್ವಹಣೆ ಬಗ್ಗೆ ಪ್ರಧಾನಿ ಕಚೇರಿ ಅಸಂತುಷ್ಟವಾಗಿದ್ದು, ಸಚಿವ ಜಾವ್ಡೇಕರ್ ಕೂಡಾ ಕಾರ್ಯನಿರ್ವಹಣೆಯಲ್ಲಿ ವಿಫಲವಾಗಿದ್ದಾರೆ ಎನ್ನಲಾಗಿದೆ.


ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

MGNREGA ಮರುನಾಮಕರಣದ ನಿರ್ಧಾರದ ವಿರುದ್ಧ ಕಾಂಗ್ರೆಸ್ ಕಿಡಿ, ನಾಳೆಯಿಂದ ಪ್ರತಿಭಟನೆ

ದಿಡೀರನೆ ದೆಹಲಿ ಜನತೆ ಬಳಿ ಕ್ಷಮೆಯಾಚಿಸಿದ ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ

ಸಿಡ್ನಿ ಗುಂಡಿನ ದಾಳಿಕೋರರಲ್ಲಿ ಒಬ್ಬಾತ ಹೈದರಾಬಾದ್‌ ಮೂಲದವ, ಇಲ್ಲಿದೆ ಮಾಹಿತಿ

ಲಿಯೋನೆಲ್ ಮೆಸ್ಸಿ ಕಾರ್ಯಕ್ರಮದಲ್ಲಿ ಧಾಂದಲೆ: ಪ.ಬಂಗಾಳ ರಾಜಕೀಯದಲ್ಲಿ ಭಾರೀ ಬೆಳವಣಿಗೆ

ನ್ಯಾಷನಲ್ ಹೆರಾಲ್ಡ್‌ ಪ್ರಕರಣ, ಸೋನಿಯಾ, ರಾಹುಲ್ ಗಾಂಧಿಗೆ ಬಿಗ್‌ ರಿಲೀಫ್‌

ಮುಂದಿನ ಸುದ್ದಿ
Show comments