Webdunia - Bharat's app for daily news and videos

Install App

ಕಂಚಿನ ಪದಕ ಗೆದ್ದ ಸರಬ್ಜೋತ್‌ ಸಿಂಗ್‌ಗೆ ಮೋದಿಯಿಂದ ಶುಭಾಶಯ

Sampriya
ಮಂಗಳವಾರ, 30 ಜುಲೈ 2024 (18:52 IST)
Photo Courtesy X
ಪ್ಯಾರಿಸ್: ಇಲ್ಲಿ ನಡೆಯುತ್ತಿರುವ ಒಲಿಂಪಿಕ್ ಕ್ರೀಡಾಕೂಟದಲ್ಲಿ ಏರ್ ಪಿಸ್ತೂಲ್ ಮಿಶ್ರ ತಂಡದಲ್ಲಿ ಸರಬ್ಜೋತ್ ಸಿಂಗ್ ಮತ್ತು ಸಹ ಶೂಟರ್ ಮನು ಭಾಕರ್ ಅವರು ಭಾರತಕ್ಕೆ ಕಂಚಿನ ಪದಕವನ್ನು ತಂದುಕೊಟ್ಟಿದ್ದಾರೆ. ‌

ಇನ್ನೂ ವಿಶೇಷ ಸಾಧನೆ ಮಾಡಿದ ಕಂಚಿನ ಪದಕ ವಿಜೇತ ಸರಬ್ಜೋತ್ ಸಿಂಗ್ ಜತೆ ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡಿ ಪ್ಯಾರಿಸ್ ಕ್ರೀಡಾಕೂಟದಲ್ಲಿ ಸಾಧನೆಗಾಗಿ ಅವರನ್ನು ಅಭಿನಂದಿಸಿದ್ದಾರೆ.

ನಿಮಗೆ ಹೃತ್ಪೂರ್ವಕ ಅಭಿನಂದನೆಗಳು. ನೀವು ಭಾರತದ ಕೀರ್ತಿಯನ್ನು ಎತ್ತರಕ್ಕೆ ಕೊಂಡೊಯ್ದಿದ್ದೀರಿ ಎಂದು ಪ್ರಧಾನಿ ಅವರು ಸಿಂಗ್‌ಗೆ ಶುಭಕೋರಿದ್ದಾರೆ.

ಸರಬ್ಜೋತ್ ಸಿಂಗ್ ಮತ್ತು ಸಹ ಶೂಟರ್ ಮನು ಭಾಕರ್ ಅವರು ನಡೆಯುತ್ತಿರುವ ಕ್ರೀಡಾಕೂಟದಲ್ಲಿ 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ತಂಡ ಕಂಚಿನ ಪದಕವನ್ನು ಗೆದ್ದಿದ್ದಾರೆ. 22ರ ಹರೆಯದ ಇಬ್ಬರು ಆಟಗಾರರು ದಕ್ಷಿಣ ಕೊರಿಯಾದ ಲೀ ವೊನೊಹೊ ಮತ್ತು ಓಹ್ ಯೆ ಜಿನ್ ಅವರನ್ನು 16-10 ಅಂತರದಿಂದ ಚಟೌರೊಕ್ಸ್‌ನ ಶೂಟಿಂಗ್ ರೇಂಜ್‌ನಲ್ಲಿ ಸೋಲಿಸಿ ಕಂಚಿನ ಪದಕಕ್ಕೆ ಕೊರಳೊಡ್ಡಿದರು.

ಭಾನುವಾರ ಇದೇ ಸ್ಥಳದಲ್ಲಿ ನಡೆದ ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಭಾಕರ್ ಕಂಚಿನ ಪದಕ ಗೆದ್ದಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ರಸಗೊಬ್ಬರ ರೈತರಿಗೆ ಸಿಗಲು ಸರ್ಕಾರ ವ್ಯವಸ್ಥೆಯೇ ಮಾಡಿಲ್ಲ: ಬಿವೈ ವಿಜಯೇಂದ್ರ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಹಲಸಿನ ಹಣ್ಣು ತಿಂದು ವಾಹನ ಚಲಾಯಿಸುವಾಗ ಟ್ರಾಫಿಕ್ ಪೊಲೀಸರಿಗೆ ಸಿಕ್ಕಿಬಿದ್ರೆ ಕತೆ ಫಿನಿಶ್

ಮುಂದಿನ ಸುದ್ದಿ
Show comments