ದಸರಾ ಸಂದರ್ಭದಲ್ಲಿಯೇ ಮೋದಿ ಸರ್ಕಾರದಿಂದ ಗುಡ್ ನ್ಯೂಸ್: ಕಿಸಾನ್ ಸಮ್ಮಾನ್ ನಿಧಿ ಬಿಡುಗಡೆ

Krishnaveni K
ಭಾನುವಾರ, 6 ಅಕ್ಟೋಬರ್ 2024 (09:21 IST)
ನವದೆಹಲಿ: ದೇಶದ 9.5 ಕೋಟಿ ರೈತರ ಖಾತೆಗೆ ಮೋದಿ ಸರ್ಕಾರ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ 18 ನೇ ಕಂತು ಬಿಡುಗಡೆ ಮಾಡಿದೆ. ಈ ಮೂಲಕ ದಸರಾ ಹಬ್ಬದ ಸಂದರ್ಭದಲ್ಲಿ ರೈತರಿಗೆ ಗುಡ್ ನ್ಯೂಸ್ ಕೊಟ್ಟಿದೆ.

ಐದು ಎಕರೆಯೊಳಗಿನ ಜಮೀನು ಹೊಂದಿರುವ ಯಾವುದೇ ಸರ್ಕಾರಿ ಹುದ್ದೆ ಅಥವಾ ಆದಾಯ ತೆರಿಗೆ ಪಾವತಿ ಮಾಡದ ರೈತರಿಗೆ ಮೋದಿ ಸರ್ಕಾರ ಪ್ರೋತ್ಸಾಹ ಧನವಾಗಿ 6,000 ರೂ. ನೀಡುತ್ತಿದೆ. ಈ ಪೈಕಿ ಇದುವರೆಗೆ 17 ಕಂತುಗಳನ್ನು ಬಿಡುಗಡೆ ಮಾಡಲಾಗಿತ್ತು. ರೈತರ ಖಾತೆಗೆ ನೇರವಾಗಿ ಹಣ ವರ್ಗಾವಣೆಯಾಗಿತ್ತು.

ಇತ್ತೀಚೆಗಷ್ಟೇ ಅಕ್ಟೋಬರ್ ಮೊದಲ ವಾರದಲ್ಲಿ ಕಿಸಾನ್ ಸಮ್ಮಾನ್ ನಿಧಿಯ 18 ನೇ ಕಂತು ಬಿಡುಗಡೆಯಾಗಲಿದೆ ಎಂದು ಸೂಚನೆ ಸಿಕ್ಕಿತ್ತು. ಅದರಂತೆ ಈಗ ಕೇಂದ್ರ ಸರ್ಕಾರ ಫಲಾನುಭವಿ ರೈತರ ಖಾತೆಗೆ 18 ನೇ ಕಂತಿನ ಹಣ ಜಮೆ ಮಾಡಿದೆ. ಸುಮಾರು 9.5 ಕೋಟಿ ರೈತರ ಖಾತೆಗೆ 20,000 ಕೋಟಿ ಹಣ ಜಮೆ ಮಾಡಲಾಗಿದೆ.

ಈ ಯೋಜನೆಯಡಿ ಕಳೆದ 17 ಕಂತುಗಳಲ್ಲಿ 74,492.71 ಕೋಟಿ ರೂ. ಹಣವನ್ನು ಬಿಡುಗಡೆ ಮಾಡಲಾಗಿತ್ತು. ಮೋದಿ ಸರ್ಕಾರದ ಜನಪ್ರಿಯ ಯೋಜನೆಗಳಲ್ಲಿ ಇದೊಂದು ಆಗಿದ್ದು, 2019 ರಲ್ಲಿ ರೈತರನ್ನು ಆರ್ಥಿಕವಾಗಿ ಸಶಕ್ತರಾಗಿ ಮಾಡುವ ಉದ್ದೇಶದಿಂದ ಜಾರಿಗೆ ತರಲಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರುಬೈಯಾ ಸಯೀದ್ ಅಪಹರಣ ಪ್ರಕರಣದಲ್ಲಿ ಶಂಕಿತನ ಬಂಧನ, ಏನಿದು ಕೇಸ್

ಸಿದ್ದರಾಮಯ್ಯ ಸರ್ಕಾರದಿಂದ ರೈತರ ಅಸಡ್ಡೆ: ಬಿವೈ ವಿಜಯೇಂದ್ರ

ನಾಳೆ ಡಿಕೆ ಶಿವಕುಮಾರ್ ಮನೆಯಲ್ಲಿ ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌, ಕುತೂಹಲ ಮೂಡಿಸಿದ ನಾಯಕರ ನಡೆ

ವಿಪಕ್ಷಗಳ ಗದ್ದಲಕ್ಕೆ ಸತತ ಸೋಲು ಕಾರಣ: ಕಂಗನಾ ರಣಾವತ್ ಕಿಡಿ

ಪ್ರತಾಪ್ ಸಿಂಹ, ಯತ್ನಾಳ್ ವಿರುದ್ಧ ನಾಲಿಗೆ ಹರಿಬಿಟ್ಟ ಎಸ್‌ಡಿಪಿಐ ಮುಖಂಡನ ವಿರುದ್ಧ ದೂರು

ಮುಂದಿನ ಸುದ್ದಿ
Show comments