Webdunia - Bharat's app for daily news and videos

Install App

ಕರ್ನಾಟಕ ರಾಜ್ಯಕ್ಕೆ ನಮ್ಮ ಸರ್ಕಾರ ಅನ್ಯಾಯ ಮಾಡಲ್ಲ: ಗಡ್ಕರಿ

Webdunia
ಶನಿವಾರ, 3 ಸೆಪ್ಟಂಬರ್ 2016 (17:30 IST)
ಕರ್ನಾಟಕ ರಾಜ್ಯಕ್ಕೆ ನಮ್ಮ ಸರ್ಕಾರ ಯಾವುದೇ ರೀತಿಯ ಅನ್ಯಾಯ ಮಾಡಲ್ಲ ಎಂದು ಕೇಂದ್ರ ಹೆದ್ದಾರಿ ಮತ್ತು ಸಾರಿಗೆ ಖಾತೆ ಸಚಿವ ನಿತಿನ್ ಗಡ್ಕರಿ ಭರವಸೆ ನೀಡಿದ್ದಾರೆ.
 
ಕೊಪ್ಪಳದಲ್ಲಿ ಹೆದ್ದಾರಿ ಕಾಮಗಾರಿಗೆ ಚಾಲನೆ ನೀಡಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಈಗ ನಿರ್ಮಾಣವಾಗುತ್ತಿರುವ ರಸ್ತೆಗಳು 5 ವರ್ಷಗಳಾದರೂ ಹಾಳುಗುವುದಿಲ್ಲ, ಹೆದ್ದಾರಿ ನಿರ್ಮಾಣದಿಂದ ರಸ್ತೆ ಅಪಘಾತಗಳ ಸಂಖ್ಯೆಯಲ್ಲಿ ಕಡಿಮೆಯಾಗುತ್ತಿವೆ ಎಂದರು.
 
ಪ್ರತಿ ವರ್ಷ ಐದು ಲಕ್ಷ ಜನರು ರಸ್ತೆ ಅಪಘಾತಗಳಲ್ಲಿ ಸಾವನ್ನಪ್ಪುತ್ತಿದ್ದಾರೆ.  ರಸ್ತೆ ಅಪಘಾತಗಳಿಗೆ ಗುಣಮಟ್ಟವಾದ ರಸ್ತೆಗಳಿಲ್ಲದಿರುವುದೇ ಮೂಲ ಕಾರಣವಾಗಿದೆ ಎಂದು ತಿಳಿಸಿದ್ದಾರೆ.
 
4 ಸಾವಿರ ಕೋಟಿ ವೆಚ್ಚದಲ್ಲಿ 2 ಲಕ್ಷ ಕಿ.ಮಿ ಹೆದ್ದಾರಿ ನಿರ್ಮಾಣ ಮಾಡಲಾಗುತ್ತಿದೆ. ಕರ್ನಾಟಕ ರಾಜ್ಯಕ್ಕೆ ಮೋದಿ ಸರಕಾರದಿಂದ ಅನ್ಯಾಯವಾಗುವುದಿಲ್ಲ. ರಾಜ್ಯಗಳ ಅಭಿವೃದ್ಧಿಯಲ್ಲಿ ದೇಶದ ಅಭಿವೃದ್ಧಿ ಅಡಗಿದೆ ಎನ್ನುವುದು ಪ್ರಧಾನಿ ಮೋದಿಯವರ ಅನಿಸಿಕೆಯಾಗಿದೆ ಎಂದು ಕೇಂದ್ರ ಸಚಿವ ನಿತೀನ್ ಗಡ್ಕರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments