Webdunia - Bharat's app for daily news and videos

Install App

ಪ್ರತ್ಯೇಕತಾವಾದಿ ನಾಯಕರಿಗೆ ಸರಕಾರಿ ಸೌಲಭ್ಯಗಳು ರದ್ದು: ಮೋದಿ ಖಡಕ್ ನಿಲುವು

Webdunia
ಗುರುವಾರ, 1 ಸೆಪ್ಟಂಬರ್ 2016 (18:58 IST)
ಮಹತ್ವದ ಬೆಳವಣಿಗೆಯೊಂದರಲ್ಲಿ ಜಮ್ಮು ಕಾಶ್ಮಿರದಲ್ಲಿರುವ ಪ್ರತ್ಯೇಕತಾವಾದಿ ನಾಯಕರುಗಳಿಗೆ ಎಲ್ಲಾ ಸರಕಾರಿ ಸೌಲಭ್ಯಗಳನ್ನು ರದ್ದುಗೊಳಿಸುವ ಕುರಿತಂತೆ ಮೋದಿ ಸರಕಾರ ಚಿಂತನೆ ನಡೆಸಿದೆ. 
 
ಮಾಧ್ಯಮ ವರದಿಗಳ ಪ್ರಕಾರ, ಪ್ರತ್ಯೇಕತಾವಾದಿ ನಾಯಕರುಗಳಾದ ಸಯೀದ್ ಅಲಿ ಶಾ ಗಿಲಾನಿ, ಮಿರ್‌ವೈಜ್ ಫಾರೂಕ್ ಮತ್ತು ಯಾಸಿನ್ ಮಲಿಕ್ ಅವರಿಗೆ ವಿಮಾನದ ಟಿಕೆಟ್, ಹೋಟೆಲ್, ಟ್ಯಾಕ್ಸಿ ಸೇವೆಗಳನ್ನು ರದ್ದುಗೊಳಿಸಲು ಸಿದ್ದತೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.
 
ಪ್ರಧಾನಿ ಮೋದಿ ನೇತೃತ್ವದ ಸರಕಾರ ಜಮ್ಮು ಕಾಶ್ಮಿರದಲ್ಲಿರುವ ಮೆಹಬೂಬಾ ಮುಫ್ತಿ ನೇತೃತ್ವದ ಸರಕಾರ ಕೂಡಾ ಪ್ರತ್ಯೇಕತಾವಾದಿಗಳಿಗೆ ನೀಡುತ್ತಿರುವ ಸೌಲಭ್ಯಗಳನ್ನು ರದ್ದುಗೊಳಿಸುವಂತೆ ಕೋರಿದೆ.
 
ಗಮನಾರ್ಹ ವಿಷಯವೆಂದರೆ, ಪ್ರತಿ ವರ್ಷ ಪ್ರತ್ಯೇಕತಾವಾದಿ ನಾಯಕರುಗಳಿಗಾಗಿ ಸರಕಾರ 100 ಕೋಟಿ ವೆಚ್ಚ ಮಾಡುತ್ತಿದೆ. ಅದರಲ್ಲಿ ಕೇಂದ್ರ ಸರಕಾರ ಶೇ.90 ರಷ್ಟು ಪಾಲು ಹೊಂದಿದ್ದರೆ ರಾಜ್ಯ ಸರಕಾರ ಕೇವಲ ಶೇ.10 ರಷ್ಟು ಪಾಲು ಹೊಂದಿದೆ.
 
ಪ್ರಸ್ತುತ ಪ್ರತ್ಯೇಕತಾವಾದಿ ನಾಯಕರುಗಳಿಗೆ 950 ಪೊಲೀಸರು ರಕ್ಷಣೆಯನ್ನು ನೀಡುತ್ತಿದ್ದು, ಅವರ ಭದ್ರತೆಯನ್ನು ಹಿಂಪಡೆಯುವ ಬಗ್ಗೆ ರಾಜ್ಯ ಸರಕಾರ ಅಂತಿಮ  ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
 
ಹಿಜ್ಬುಲ್ ಮುಜಾಹಿದಿನ್ ಉಗ್ರ ಬುರ್ಹಾನ್ ವನಿ ಎನ್‌ಕೌಂಟರ್ ಹತ್ಯೆಯ ನಂತರ ಉಂಟಾದ ಗಲಭೆಗಳಿಂದ ಕಾಶ್ಮಿರದಾದ್ಯಂತ ಉದ್ರಿಕ್ತ ಪರಿಸ್ಥಿತಿ ನಿರ್ಮಾಣವಾಗಿದೆ. ಕಳೆದ 55 ದಿನಗಳ ಅವಧಿಯಲ್ಲಿ 72 ಜನರು ಸಾವನ್ನಪ್ಪಿದ್ದು 11 ಸಾವಿರ ಜನ ಗಾಯಗೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟರ್ಕಿ ಮೇಲೆ ಒಂದೊಂದೆ ಪ್ರತೀಕಾರ ತೀರಿಸುತ್ತಿರುವ ಭಾರತ: ವಿಮಾನಯಾನ ಸಂಸ್ಥೆಯ ಲೈಸನ್ಸ್‌ ರದ್ದು ಮಾಡಿದ ಭಾರತ

ಸೋಫಿಯಾ ಖುರೇಷಿ ವಿರುದ್ಧ ವಿವಾದಾತ್ಮಕ ಹೇಳಿಕೆ: ಬೆಳಗಾವಿಯಲ್ಲಿ ವಿಜಯ್ ಶಾ ವಿರುದ್ಧ ದೂರು

ಸೇನಾಧಿಕಾರಿ ಖುರೇಷಿ ಅತ್ತೆ ಮಾವನ ಮನೆ ಮೇಲೆ ದಾಳಿ ಪೋಸ್ಟ್‌: ಮೂವರ ವಿರುದ್ಧ ಪ್ರಕರಣ ದಾಖಲು

ಬರ್ತಡೇ ಆಚರಿಸಲ್ಲ ಅಂತಾ ಹೇಳಿ ನೆನಪಿನಲ್ಲಿ ಉಳಿದುಕೊಳ್ಳುವ ಹಾಗೇ ದಿನ ಕಳೆದ ಡಿಸಿಎಂ ಡಿಕೆ ಶಿವಕುಮಾರ್‌: Video

ಪಾಕ್‌ಗೆ ಸಹಾಯ ಮಾಡಿದ ಟರ್ಕಿ: ಟರ್ಕಿ ಆ್ಯಪಲ್ ಬ್ಯಾನ್ ಮಾಡಲು ಭಾರತದಲ್ಲಿ ಹೆಚ್ಚಿದ ಒತ್ತಾಯ

ಮುಂದಿನ ಸುದ್ದಿ
Show comments