Select Your Language

Notifications

webdunia
webdunia
webdunia
webdunia

ಮೋದಿ ಸರ್ಕಾರ ಪ್ರಜಾಪ್ರಭುತ್ವ ವ್ಯವಸ್ಥೆ ನಾಶಗೊಳಿಸುತ್ತಿದೆ: ಮಮತಾ

ನರೇಂದ್ರ ಮೋದಿ
ಕೋಲ್ಕತಾ , ಶುಕ್ರವಾರ, 22 ಜುಲೈ 2016 (10:29 IST)
ಪ್ರಧಾನಮಂತ್ರಿ ನರೇಂದ್ರ ಮೋದಿ ಸರಕಾರ ಕೇಸರಿಕರಣ ಗುರಿಯಾಗಿಸಿಕೊಂಡು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ನಾಶಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.
 
ಗುಜರಾತ್‌ನಲ್ಲಿ ಗೋವು ರಕ್ಷಣೆ ನೆಪದಲ್ಲಿ ದಲಿತರ ಮೇಲೆ ನಡೆದ ದೌರ್ಜನ್ಯ ಹೇಯ ಕೃತ್ಯವಾಗಿದೆ. ಗೋರಕ್ಷಣೆ ಹೆಸರಲ್ಲಿ ಕೋಮುವಾದವನ್ನು ಹರಡಿಸಲು ಮೋದಿ ಸರಕಾರ ಪ್ರಯತ್ನಿಸುತ್ತಿರುವುದು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಗುಡುಗಿದ್ದಾರೆ.  
 
ತೃಣಮೂಲ ಕಾಂಗ್ರೆಸ್ ಪಕ್ಷ ಆಯೋಜಿಸಿದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಕೇಂದ್ರ ಸರಕಾರ ರಾಜ್ಯಗಳ ವಿಷಯಗಳಲ್ಲಿ ಅನಗತ್ಯವಾಗಿ ಹಸ್ತಕ್ಷೇಪ ಮಾಡುತ್ತಿದೆ. ಬಿಜೆಪಿಯನ್ನು ಪ್ರಬಲವಾಗಿ ಎದುರಿಸಲು ಪ್ರಾದೇಶಿಕ ಪಕ್ಷಗಳು ಸಶಕ್ತವಾಗಬೇಕು ಎಂದು ಕರೆ ನೀಡಿದರು. 
 
ಮೋದಿ ಸರಕಾರ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹದಗೆಡಿಸಿ, ರಾಜ್ಯಗಳಲ್ಲಿ ಅನಗತ್ಯವಾಗಿ ಮೂಗು ತೂರಿಸುತ್ತಿದೆ. 1993ರಲ್ಲಿ .ಯುವ ಕಾಂಗ್ರೆಸ್ ಕಾರ್ಯಕರ್ತರ ಹತ್ಯೆಯ ದಿನವನ್ನು ಹುತಾತ್ಮರ ದಿನವನ್ನಾಗಿ ಪ್ರತಿ ವರ್ಷವು ಆಚರಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
 
ಪ್ರಾದೇಶಿಕ ಶಕ್ತಿಗಳನ್ನು ಬಲಪಡಿಸಲು ನಮ್ಮ ಆತ್ಮಿಯ ಗೆಳೆಯರಿಗೆ ನೆರವು ನೀಡಲು ಸಿದ್ದವಾಗಿದ್ದೇನೆ. ಆದರೆ, ನನಗೆ ಪ್ರಧಾನಿಯಾಗುವ ಯಾವುದೇ ಉದ್ದೇಶವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ,
 
ನಾನು ಗುಡಿಸಲಿನಲ್ಲಿಯೇ ವಾಸಿಸುತ್ತಾ ರಾಜ್ಯದ ಜನತೆಯ ಸೇವೆ ಮಾಡಬೇಕು ಎನ್ನುವುದೇ ನನ್ನ ಬಯಕೆಯಾಗಿದೆ. ಇದಕ್ಕಿಂತ ಹೆಚ್ಚಿನ ಬಯಕೆ ನನಗಿಲ್ಲ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.
 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಪಿಎಂ ಮೋದಿಗೆ ಸಿಎಂ ಸಿದ್ದರಾಮಯ್ಯ ಬೆಂಬಲ!