Webdunia - Bharat's app for daily news and videos

Install App

ಮೋದಿ ಅವರು ಗಮನ ಬೇರೆಡೆ ಸೆಳೆಯುವ ರಾಜಕೀಯದಲ್ಲಿ ತೊಡಗಿದ್ದಾರೆ - ಬಿಜೆಪಿ ನಾಯಕ ಶತ್ರುಘ್ನ ಸಿನ್ಹಾ

Webdunia
ಭಾನುವಾರ, 13 ಮೇ 2018 (06:54 IST)
ಪಟ್ನಾ : ಪ್ರಧಾನಿಯಾಗಲು ಸಿದ್ಧ ಎಂದು ರಾಹುಲ್ ಗಾಂಧಿ ಹೇಳಿಕೆಗೆ ನರೇಂದ್ರ ಮೋದಿ ಅವರು ಟೀಕೆ ವ್ಯಕ್ತಪಡಿಸಿದ್ದ ಹಿನ್ನಲೆಯಲ್ಲಿ ಇದೀಗ ಬಿಜೆಪಿ ನಾಯಕ ಶತ್ರುಘ್ನ ಸಿನ್ಹಾ ಅವರು ಯಾರು ಬೇಕಾದರೂ ದೇಶದ ಪ್ರಧಾನಿ ಆಗಬಹುದು ಎಂದು ಹೇಳಿದ್ದಾರೆ.

'ಕಳೆದ ಕೆಲವು ವರ್ಷಗಳಲ್ಲಿ ರಾಹುಲ್ ಪ್ರಬುದ್ಧರಾಗಿದ್ದು, ಜನಸಾಮಾನ್ಯರಲ್ಲಿ ಖ್ಯಾತರಾಗಿದ್ದಾರೆ. ಅತಿ ದೊಡ್ಡ, ಹಳೆಯದಾದ ರಾಷ್ಟ್ರೀಯ ಪಕ್ಷದ ನಾಯಕರಾಗಿರುವ ರಾಹುಲ್ ಪ್ರಧಾನಿಯಾಗುವ ಸಾಧ್ಯತೆ ವ್ಯಕ್ತಪಡಿಸಿದರೆ ಅದರಲ್ಲಿ ತಪ್ಪೇನು' ಎಂದು ಅವರು ಪ್ರಶ್ನಿಸಿದ್ದಾರೆ.

 

ಕಾಂಗ್ರೆಸ್ ಅಧ್ಯಕ್ಷರು ಕೇಳಿರುವ ಸಮಂಜಸವಾದ ಪ್ರಶ್ನೆಗಳಿಗೆ ಉತ್ತರಿಸುವ ಬದಲು ಮೋದಿ ಅವರು 'ಗಮನ ಬೇರೆಡೆ ಸೆಳೆಯುವ ರಾಜಕೀಯದಲ್ಲಿ ತೊಡಗಿದ್ದಾರೆ. ಪ್ರಸಿದ್ಧಿ ಇರುವವರು (ನಾಮ್‌ದಾರ್‌), ಕೆಲಸ ಮಾಡುವವರು(ಕಾಮ್‌ದಾರ್), ಸಾಮರ್ಥ್ಯ ಇರುವವರು (ದಮ್‌ದಾರ್) ಹಾಗೂ ವಿವೇಕ ಇರುವ (ಸಮಜ್‌ದಾರ್) ಯಾರಾದರೂ ಸಂಖ್ಯಾಬಲ ಹಾಗೂ ಬೆಂಬಲ ಹೊಂದಿದ್ದರೆ ದೇಶದ ಪ್ರಧಾನಿ ಆಗಬಹುದು' ಎಂದು ಸಿನ್ಹಾ ಅವರು  ಹೇಳಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments