Webdunia - Bharat's app for daily news and videos

Install App

ಪ್ರಧಾನಿ ಮೋದಿ ಈಗ ದೇಶದ ರಾಷ್ಟ್ರಪಿತ: ಬಿಜೆಪಿ ಮುಖಂಡನ ಹೇಳಿಕೆಗೆ ಕೋಲಾಹಲ

Webdunia
ಶನಿವಾರ, 9 ಡಿಸೆಂಬರ್ 2017 (19:21 IST)
ಪ್ರಧಾನಮಂತ್ರಿ ನರೇಂದ್ರ ಮೋದಿ ದೇಶದ ರಾಷ್ಟ್ರಪಿತರಂತೆ ಎಂದು ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ನೀಡಿದ ವಿವಾದಾತ್ಮಕ ಹೇಳಿಕೆ ರಾಜಕೀಯ ವಲಯದಲ್ಲಿ ಕೋಲಾಹಲ ಸೃಷ್ಟಿಸಿದೆ. ಎಲ್ಲೆಡೆಯಿಂದ ವ್ಯಾಪಕ ಟೀಕೆಗಳು ವ್ಯಕ್ತವಾಗಿವೆ.
ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆ ವಿಶ್ವದಾದ್ಯಂತ ಹರಡಿದೆ. ಅವರು ಈಗ ದೇಶದ ರಾಷ್ಟ್ರಪಿತ ಸ್ಥಾನದಲ್ಲಿದ್ದಾರೆ ಎಂದು ಸಂಬಿತ್ ಪಾತ್ರಾ ನೀಡಿದ ಹೇಳಿಕೆ ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕಿಸಿದೆ.
 
ಸಂಬಿತ್ ಪಾತ್ರಾ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಪಕ್ಷದ ವಕ್ತಾರ ರಣದೀಪ್ ಸುರ್ಜೇವಾಲಾ, ಸಂಬಿತ್ ಪಾತ್ರಾಗೆ ಗಾಂಧೀಜಿಯವರ ಬಗ್ಗೆ ಏನೂ ಗೊತ್ತಿಲ್ಲ. ಪ್ರಧಾನಿ ಮೋದಿ ಗಾಂಧಿಯವರಿಗಿಂತ ದೊಡ್ಡವರಲ್ಲ ಎಂದು ಕಿಡಿಕಾರಿದ್ದಾರೆ.
 
ಗಾಂಧೀಜಿಯವರು ನಡೆದ ಅಹಿಂಸಾ ಮಾರ್ಗ ಅಮೆರಿಕದಿಂದ ದಕ್ಷಿಣದವರೆಗೆ ಹರಡಿದೆ. ಗಾಂಧೀಜಿ ಶಾಂತಿ ಮಂತ್ರ ಎಲ್ಲೆಡೆಯೂ ಹರಡಿದೆ. ಯಾವುದೇ ಮಾಹಿತಿಯಿರದೇ ಮನಬಂದಂತೆ ಹೇಳಿಕೆ ನೀಡಬಾರದು. ಕೂಡಲೇ ಸಂಬಿತ್ ಪಾತ್ರಾ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments