Webdunia - Bharat's app for daily news and videos

Install App

ಭಾರತೀಯರ ಭದ್ರತೆ ಕುರಿತು ಪರಿಶೀಲನೆಗೆ ಮೋದಿ ಸಭೆ

Webdunia
ಶನಿವಾರ, 22 ಏಪ್ರಿಲ್ 2023 (11:57 IST)
ನವದೆಹಲಿ : ಸೈನಿಕರ ಸಂಘರ್ಷಕ್ಕೆ ಸಿಲುಕಿರುವ ಸುಡಾನ್ನಲ್ಲಿ ಭಾರತೀಯರ ಪರಿಸ್ಥಿತಿಯನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ.
 
ಶುಕ್ರವಾರ ಬೆಳಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೋ ಗುಟೆರಸ್ ಅವರೊಂದಿಗೆ ಸುಡಾನ್ನಲ್ಲಿ ಹದಗೆಡುತ್ತಿರುವ ಪರಿಸ್ಥಿತಿಯ ಕುರಿತು ಚರ್ಚಿಸಿದ್ದಾರೆ.

ಸುಡಾನ್ನಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದೆ. ಇದು ಆಕಸ್ಮಿಕ ಯೋಜನೆಗಳು ಹಾಗೂ ಜನರನ್ನು ಸ್ಥಳಾಂತರಗೊಳಿಸುವುದು ಅಗತ್ಯವಾಗಿದೆ. ಜೊತೆಗೆ ಸುಡಾನ್ನಲ್ಲಿರುವ ಭಾರತೀಯ ಸಮುದಾಯದ ಸುರಕ್ಷತೆ ಹಾಗೂ ಯೋಗಕ್ಷೇಮವನ್ನು ಖಾತ್ರಿಪಡಿಸುವತ್ತ ಗಮನಹರಿಸಲಾಗುತ್ತಿದೆ ಎಂದು ಸರ್ಕಾರ ತಿಳಿಸಿದೆ.

ಸುಡಾನ್ನಲ್ಲಿ ಕಳೆದ ಶನಿವಾರ ಸೇನೆ ಹಾಗೂ ಅರೆಸೇನಾಪಡೆಗಳ ನಡುವೆ ಸಂಘರ್ಷ ಪ್ರಾರಂಭವಾಗಿದ್ದು, ಇದೀಗ ಪರಿಸ್ಥಿತಿ ಇನ್ನಷ್ಟು ತಾರಕಕ್ಕೇರಿದೆ. ಕದನ ವಿರಾಮವನ್ನು ಒಪ್ಪದ ಮಿಲಿಟರಿ ಪಡೆಗಳ ಘರ್ಷಣೆಗೆ 300ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. 

ಸುಡಾನ್ ರಾಜಧಾನಿ ಖಾರ್ಟೂಮ್ ಸೇರಿದಂತೆ ಹಲವು ನಗರಗಳಲ್ಲಿ ಗುಂಡಿನ ದಾಳಿ ಸೇರಿದಂತೆ ಭೀಕರ ಯುದ್ಧವೇ ನಡೆದಿದೆ. ದೇಶಾದ್ಯಂತ ಹಲವೆಡೆ ವಿದ್ಯುತ್ ಕಡಿತವಾಗಿದ್ದರೆ, ಆಹಾರ, ನೀರು ಸಿಗದೆ ಜನರು ನರಳಾಡಿದ್ದಾರೆ. ಸ್ಥಳೀಯ ಜನರ ಸಂಪರ್ಕವೂ ಅಸ್ತವ್ಯಸ್ತಗೊಂಡಿರುವುದಾಗಿ ವರದಿಗಳು ತಿಳಿಸಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

19ಮಾಜಿ ಮಂತ್ರಿಗಳ ಭದ್ರತೆ ಕೈಬಿಟ್ಟ ಗೃಹ ಸಚಿವಾಲಯ, ಆದರೆ ಸ್ಮೃತಿ ಇರಾನಿಗೆ ಯಾಕೆ ಈ ವಿಶೇಷತೆ

ಛತ್ತೀಸ್‌ಗಢ: ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಮಹಿಳಾ ಮಾವೋವಾದಿ ಹತ್ಯೆ

ಮದ್ಯದ ಬೆಲೆ ಕೇಳಿಯೇ ನಶೆ ಏರುವಂತಾಗಿದೆ: ಬಿಜೆಪಿ ವ್ಯಂಗ್ಯ

Suhas Shetty Case: ಹತ್ಯೆ ಹಿಂದೆ ಬಜ್ಪೆ ಹೆಡ್‌ ಕಾನ್‌ಸ್ಟೇಬಲ್‌ ಭಾಗಿಯಾಗಿರುವ ಶಂಕೆ

Suhas Shetty Case: ಯುಟಿ ಖಾದರ್ ಸ್ಪೀಕರ್‌ ಆಗಿರುವವರೆಗೆ ಸಾವಿಗೆ ನ್ಯಾಯ ಸಿಗುವ ನಂಬಿಕೆಯಿಲ್ಲ

ಮುಂದಿನ ಸುದ್ದಿ
Show comments