Webdunia - Bharat's app for daily news and videos

Install App

ಮೋದಿಯಿಂದ ಕಪ್ಪುಹಣದ ವಿರುದ್ಧ ಸಮರವಲ್ಲ, ಬಡವರ ವಿರುದ್ಧ ಸಮರ: ಮಮತಾ ಬ್ಯಾನರ್ಜಿ

Webdunia
ಗುರುವಾರ, 17 ನವೆಂಬರ್ 2016 (14:39 IST)
ಪ್ಲ್ಯಾಸ್ಟಿಕ್ ಮನಿ ಹೆಸರಲ್ಲಿ ದೇಶವನ್ನು ಕೊಳ್ಳೆ ಹೊಡೆಯಲಾಗುತ್ತಿದೆ. ಮೊದಲು ವಿದೇಶದಲ್ಲಿರುವ ಕಪ್ಪು ಹಣವನ್ನು ಮರಳಿ ತನ್ನಿ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
 
ದೆಹಲಿಯ ಅಜಾದ್ ಮಂಡಿಯಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರೊಂದಿಗೆ ಸಭೆಯಲ್ಲಿ ಪಾಲ್ಗೊಂಡ ಮಮತಾ, ಪ್ರಧಾನಿ ಮೋದಿ ದೇಶದ ಜನತೆಯನ್ನು ಭಿಕ್ಷುಕರನ್ನಾಗಿಸಿದ್ದಾರೆ ಎಂದು ಕಿಡಿಕಾರಿದರು.
 
ಪ್ರತಿದಿನ ವಜ್ರ, ಬಂಗಾರ, ಎಟಿಎಂ ತಿನ್ನೋಕಾಗುತ್ತಾ?ಪ್ರತಿ ದಿನ ನೀತಿ ಬದಲಾಗುತ್ತಿರುವುದರಿಂದ ದೇಶದ ಜನತೆ ತೀವ್ರ ತೊಂದರೆ ಎದುರಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
 
ದೇಶದಲ್ಲಿ ಸಾವಿರಾರು ಕೋಟಿ ರೂಪಾಯಿಗಳನ್ನು ಹೊಂದಿರುವ ಭ್ರಷ್ಟರು ನೆಮ್ಮದಿಯಾಗಿದ್ದಾರೆ. ಆದರೆ. ಬಡವರು ಸಣ್ಣ ವ್ಯಾಪಾರಿಗಳು, ಉದ್ಯೋಗಿಗಳು ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ವಿದೇಶದಲ್ಲಿರುವ ಕಪ್ಪು ಹಣವನ್ನು ತರಲಾಗದ ಕೇಂದ್ರ ಸರಕಾರ ತನ್ನದೇ ದೇಶದ ಜನತೆಯ ವಿರುದ್ಧ ಸಮರ ಸಾರಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುಡುಗಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mallikarjun Kharge: ಚುಟ್ ಪುಟ್ ದಾಳಿ ಎಂದ ಮಲ್ಲಿಕಾರ್ಜುನ ಖರ್ಗೆಗೂ ಪಪ್ಪು ಮನಸ್ಥಿತಿ ಬಂತಾ: ಪ್ರತಾಪ್ ಸಿಂಹ

ED Raid: ಸಚಿವ ಪರಮೇಶ್ವರ್ ಸಿದ್ಧಾರ್ಥ್ ಕಾಲೇಜು ಇಡಿ ದಾಳಿಗೂ ರನ್ಯಾ ರಾವ್ ಗೂ ಲಿಂಕ್

ED Raid: ಗೃಹಸಚಿವ ಡಾ ಜಿ ಪರಮೇಶ್ವರ್ ಬುಡಕ್ಕೇ ಬಂತು ಇಡಿ: ಸಿದ್ಧಾರ್ಥ ಶಿಕ್ಷಣ ಸಂಸ್ಥೆ ಮೇಲೆ ದಾಳಿ

Arecanut price today: ಅಡಿಕೆ, ಕಾಳುಮೆಣಸು ಬೆಳೆಗಾರರಿಗೆ ನಿರಾಸೆ

Mallikarjun Kharge video: ಭಾಷಣದ ನಡುವೆ ನಮ್ಮ ಪಾಕಿಸ್ತಾನ ಎಂದ ಮಲ್ಲಿಕಾರ್ಜುನ ಖರ್ಗೆ: ಟ್ರೋಲ್

ಮುಂದಿನ ಸುದ್ದಿ
Show comments