Select Your Language

Notifications

webdunia
webdunia
webdunia
webdunia

ಭ್ರಷ್ಟಾಚಾರ ನಿಭಾಯಿಸಲು ಮೋದಿ ವಿಫಲ– ಅಣ್ಣಾ ಹಜಾರೆ

ಭ್ರಷ್ಟಾಚಾರ ನಿಭಾಯಿಸಲು ಮೋದಿ ವಿಫಲ– ಅಣ್ಣಾ ಹಜಾರೆ
ಜೈಪುರ್ , ಭಾನುವಾರ, 24 ಡಿಸೆಂಬರ್ 2017 (15:33 IST)
ದೇಶದ ಗಂಭೀರ ಸಮಸ್ಯೆಗಳನ್ನು ಹಾಗೂ ಭ್ರಷ್ಟಾಚಾರ ಹಾವಳಿ ನಿಭಾಯಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಹೇಳಿದ್ದಾರೆ.

ರಾಜಸ್ತಾನದ ನಗೌರಾ ಜಿಲ್ಲೆಯಲ್ಲಿ ಹಮ್ಮಿಕೊಂಡಿದ್ದ ಮದ್ಯ ಮುಕ್ತ ಗ್ರಾಮದ ಘೋಷಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರೈತರ ಸಂಕಷ್ಟಕ್ಕಿರುವ ಗಂಭೀರ ಸಮಸ್ಯೆಗಳನ್ನು ಬಗೆಹರಿಸಲು ಕೇಂದ್ರ ಸರ್ಕಾರದಿಂದ ಸಾಧ್ಯವಾಗಿಲ್ಲ. ಇದರಿಂದ ಸರಣ ಆತ್ಮಹತ್ಯೆಗಳು ನಡೆಯುತ್ತಿವೆ ಎಂದು ದೂರಿದ್ದಾರೆ.

ಭ್ರಷ್ಟಾಚಾರ ನಿಯಂತ್ರಣ ಮಾಡಲು ಸರ್ಕಾರದಿಂದ ಸಾಧ್ಯವಾಗಿಲ್ಲ. ಇನ್ನಷ್ಟು ಹೆಚ್ಚಾಗಿದ್ದು, ಸಮಾಜವನ್ನು ಹಾಳುಗೆಡುವುತ್ತಿದೆ. ಈ ಸಮಸ್ಯೆಗಳ ಬಗ್ಗೆ ಮೋದಿ ಅವರಿಗೆ ಹಲವು ಪತ್ರಗಳನ್ನು ಬರೆದಿದ್ದೇನೆ. ಆದರೆ, ಒಂದು ಪತ್ರಕ್ಕೂ ಉತ್ತರಿಸುವ ಸೌಜನ್ಯ ತೋರಿಸಿಲ್ಲ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿಯ ಪತ್ರ ರಾಜಕೀಯದಿಂದ ಏಕತೆಗೆ ಧಕ್ಕೆ– ದಿನೇಶ ಗುಂಡೂರಾವ್