ಮೋದಿ ಸರ್ಕಾರಕ್ಕೆ ಸುಪ್ರೀಂಕೋರ್ಟಿನಿಂದ ಕಪಾಳ ಮೋಕ್ಷ !

Webdunia
ಬುಧವಾರ, 10 ಏಪ್ರಿಲ್ 2019 (18:23 IST)
ರಫೇಲ್ ಹಗರಣ ಕುರಿತು ಸುಪ್ರೀಂಕೋರ್ಟ್ ತನ್ನ ನಿರ್ಧಾರ ತಿಳಿಸಿದ್ದು, ಕೇಂದ್ರ ಸರ್ಕಾರವು ಸಲ್ಲಿಸಿದ್ದ ಎಲ್ಲಾ ಆಕ್ಷೇಪಣೆಗಳನ್ನೂ ಸರ್ವಾನುಮತದಿಂದ ತಳ್ಳಿಹಾಕಿದೆ. ಇದರಿಂದ ಮೋದಿ ಸರಕಾರಕ್ಕೆ ಭಾರೀ ಮುಖಭಂಗವಾದಂತಾಗಿದೆ.

"ಹಿಂದು ಪತ್ರಿಕೆಯಲ್ಲಿ ಪ್ರಕಟವಾದ ವರದಿಗಳನ್ನೂ ಒಳಗೊಂಡಂತೆ ಇಲ್ಲಿಯವರೆಗೆ ಪ್ರಕಟವಾದ ಎಲ್ಲಾ ದಾಖಲೆಗಳನ್ನೂ ರಫೇಲ್ ಒಪ್ಪಂದದ ಪ್ರಕರಣದಲ್ಲಿ ಪರಿಶೀಲಿಸಲಾಗುವುದು" ಎಂದು ಸುಪ್ರೀಂಕೋರ್ಟಿನ ಮುಖ್ಯ ನ್ಯಾಯಮೂರ್ತಿಗಳಾದ ರಂಜನ್ ಗೊಗೋಯ್ ತಿಳಿಸಿದ್ದಾರೆ.  

ಹಿಂದು ಪತ್ರಿಕೆಯು ರಫೇಲ್ ಒಪ್ಪಂದ ಕುರಿತ ವರದಿಗಳನ್ನು ಪ್ರಕಟಿಸುವ ಮೂಲಕ 'ಪಿತೂರಿ' ನಡೆಸುತ್ತಿದೆ ಎಂಬ ವಾದವನ್ನೂ ಸುಪ್ರೀಂಕೋರ್ಟ್ ತಳ್ಳಿಹಾಕಿತು.

ರಕ್ಷಣಾ ಇಲಾಖೆಯ ದಾಖಲೆಗಳನ್ನು ಪತ್ರಿಕೆಯಲ್ಲಿ ಪ್ರಕಟಿಸುವ ಮೂಲಕ ರಾಷ್ಟ್ರದ ಭದ್ರತೆ ಅಪಾಯದಲ್ಲಿದೆ ಮತ್ತು ಆ ದಾಖಲೆಗಳ ಸೋರಿಕೆಯು 'ಅಧಿಕೃತ ಗೋಪ್ಯತೆ ಕಾಯಿದೆ'ಯ ಪ್ರಕಾರ ಅಪರಾಧವಾಗುತ್ತದೆ ಎಂದೂ ಕೇಂದ್ರ ಸರ್ಕಾರ ಆಕ್ಷೇಪಣೆ ಸಲ್ಲಿಸಿತ್ತು. 

ಮುಂದಿನ ವಿಚಾರಣೆ ದಿನಾಂಕವನ್ನು ನಂತರ ಪ್ರಕಟಿಸಲಾಗುವುದು ಎಂದು ನ್ಯಾಯಾಧೀಶರು ತಿಳಿಸಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ಫೋಟಕ್ಕೂ ಮುನ್ನಾ ಮನೆಗೆ ಭೇಟಿ ಕೊಟ್ಟ ಬಾಂಬರ್‌ ಉಮರ್ ಮಾಡಿದ್ದೇನು ಗೊತ್ತಾ

Karnataka Weather, ಚಳಿಯ ಜತೆಗೆ ರಾಜ್ಯದ ಈ ಭಾಗದಲ್ಲಿ ಇಂದು, ನಾಳೆ ಮಳೆ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಮುಂದಿನ ಸುದ್ದಿ
Show comments