Webdunia - Bharat's app for daily news and videos

Install App

ಮೋದಿ ಸರ್ಕಾರಕ್ಕೆ ಸುಪ್ರೀಂಕೋರ್ಟಿನಿಂದ ಕಪಾಳ ಮೋಕ್ಷ !

Webdunia
ಬುಧವಾರ, 10 ಏಪ್ರಿಲ್ 2019 (18:23 IST)
ರಫೇಲ್ ಹಗರಣ ಕುರಿತು ಸುಪ್ರೀಂಕೋರ್ಟ್ ತನ್ನ ನಿರ್ಧಾರ ತಿಳಿಸಿದ್ದು, ಕೇಂದ್ರ ಸರ್ಕಾರವು ಸಲ್ಲಿಸಿದ್ದ ಎಲ್ಲಾ ಆಕ್ಷೇಪಣೆಗಳನ್ನೂ ಸರ್ವಾನುಮತದಿಂದ ತಳ್ಳಿಹಾಕಿದೆ. ಇದರಿಂದ ಮೋದಿ ಸರಕಾರಕ್ಕೆ ಭಾರೀ ಮುಖಭಂಗವಾದಂತಾಗಿದೆ.

"ಹಿಂದು ಪತ್ರಿಕೆಯಲ್ಲಿ ಪ್ರಕಟವಾದ ವರದಿಗಳನ್ನೂ ಒಳಗೊಂಡಂತೆ ಇಲ್ಲಿಯವರೆಗೆ ಪ್ರಕಟವಾದ ಎಲ್ಲಾ ದಾಖಲೆಗಳನ್ನೂ ರಫೇಲ್ ಒಪ್ಪಂದದ ಪ್ರಕರಣದಲ್ಲಿ ಪರಿಶೀಲಿಸಲಾಗುವುದು" ಎಂದು ಸುಪ್ರೀಂಕೋರ್ಟಿನ ಮುಖ್ಯ ನ್ಯಾಯಮೂರ್ತಿಗಳಾದ ರಂಜನ್ ಗೊಗೋಯ್ ತಿಳಿಸಿದ್ದಾರೆ.  

ಹಿಂದು ಪತ್ರಿಕೆಯು ರಫೇಲ್ ಒಪ್ಪಂದ ಕುರಿತ ವರದಿಗಳನ್ನು ಪ್ರಕಟಿಸುವ ಮೂಲಕ 'ಪಿತೂರಿ' ನಡೆಸುತ್ತಿದೆ ಎಂಬ ವಾದವನ್ನೂ ಸುಪ್ರೀಂಕೋರ್ಟ್ ತಳ್ಳಿಹಾಕಿತು.

ರಕ್ಷಣಾ ಇಲಾಖೆಯ ದಾಖಲೆಗಳನ್ನು ಪತ್ರಿಕೆಯಲ್ಲಿ ಪ್ರಕಟಿಸುವ ಮೂಲಕ ರಾಷ್ಟ್ರದ ಭದ್ರತೆ ಅಪಾಯದಲ್ಲಿದೆ ಮತ್ತು ಆ ದಾಖಲೆಗಳ ಸೋರಿಕೆಯು 'ಅಧಿಕೃತ ಗೋಪ್ಯತೆ ಕಾಯಿದೆ'ಯ ಪ್ರಕಾರ ಅಪರಾಧವಾಗುತ್ತದೆ ಎಂದೂ ಕೇಂದ್ರ ಸರ್ಕಾರ ಆಕ್ಷೇಪಣೆ ಸಲ್ಲಿಸಿತ್ತು. 

ಮುಂದಿನ ವಿಚಾರಣೆ ದಿನಾಂಕವನ್ನು ನಂತರ ಪ್ರಕಟಿಸಲಾಗುವುದು ಎಂದು ನ್ಯಾಯಾಧೀಶರು ತಿಳಿಸಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments