Webdunia - Bharat's app for daily news and videos

Install App

ನರೇಂದ್ರ ಮೋದಿ ಜೀವಕ್ಕೆ ಯಾವ ಬೆದರಿಕೆಯೂ ಇಲ್ಲ: ಸುಶೀಲ್ ಕುಮಾರ್ ಶಿಂಧೆ

Webdunia
ಶನಿವಾರ, 3 ಮೇ 2014 (16:45 IST)
ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಜೀವಕ್ಕೆ ಯಾವ ಬೆದರಿಕೆಯೂ ಇಲ್ಲ ಎಂದು ಕೇಂದ್ರ ಗೃಹ ಸಚಿವ ಸುಶೀಲ್ ಕುಮಾರ್ ಶಿಂಧೆ ಹೇಳಿದ್ದಾರೆ. 
 
ಸುದ್ದಿಗಾರರ ಜತೆ ಮಾತನಾಡುತ್ತಿದ್ದ ಅವರು "ಮೋದಿಯ ಜೀವಕ್ಕೆ ಬೆದರಿಕೆ ಇದೆ ಎಂಬ ಕುರಿತು ಯಾವುದೇ ನಿರ್ದಿಷ್ಟ ಮಾಹಿತಿ ಇಲ್ಲ ಮತ್ತು  ಯಾವುದೇ ಅಹಿತಕರ ಘಟನೆಯನ್ನು ತಪ್ಪಿಸಲು ಭಾರತ ಸರ್ಕಾರ ಈಗಾಗಲೇ ಕ್ರಮಗಳನ್ನು ತೆಗೆದುಕೊಂಡಿದೆ" ಎಂದು ತಿಳಿಸಿದ್ದಾರೆ. 
 
"ಮೋದಿ ಜೀವಕ್ಕೆ ಅಪಾಯವಿದೆ ಎಂಬುದು ಭಾರತೀಯ ಜನತಾ ಪಕ್ಷದ ನಾಯಕರಿಂದ ಹಬ್ಬಿಸಲ್ಪಟ್ಟಿರುವ ಪ್ರಚಾರ ಸಿದ್ಧಾಂತ" ಎಂದು ಶಿಂಧೆ ಹೇಳಿದ್ದಾರೆ. 
 
ತಮ್ಮ ನಾಯಕರು ಅಪಾಯದಲ್ಲಿದ್ದಾರೆ ಎಂದು ಬಿಜೆಪಿ ನಾಯಕರು ಹೇಳಿಕೊಂಡ ಮಾರನೇ ದಿನ ಶಿಂಧೆ ಈ ರೀತಿಯಾಗಿ ಪ್ರತಿಕ್ರಿಯಿಸಿದ್ದಾರೆ. ಗೌಹಾತಿಗೆ ಹೊರಟಿದ್ದ ಬೆಂಗಳೂರು ಎಕ್ಸಪ್ರೆಸ್‌ ರೈಲಿನಲ್ಲಿ ಅವಳಿ ಸ್ಫೋಟವಾದ ನಂತರ ಕೇಸರಿ ಪಕ್ಷ ತಮ್ಮ ಪಕ್ಷದ ನಾಯಕರ ಜೀವಕ್ಕೆ ಅಪಾಯವಿದೆ ಎಂಬ ಭಯವನ್ನು ವ್ಯಕ್ತಪಡಿಸಿತ್ತು. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments