Publish Date: Thu, 21 Apr 2016 (21:32 IST)
Updated Date: Thu, 21 Apr 2016 (21:39 IST)
ಉತ್ತರಾಖಂಡ್ನಲ್ಲಿ ಕೇಂದ್ರ ಸರಕಾರ ಹೇರಿದ ರಾಷ್ಟ್ರಪತಿ ಆಳ್ವಿಕೆಯನ್ನು ರದ್ದುಗೊಳಿಸಿದ ಹೈಕೋರ್ಟ್ ತೀರ್ಪನ್ನು ಸ್ವಾಗತಿಸಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಹೈಕೋರ್ಟ್ ತೀರ್ಪು ಪ್ರಧಾನಿ ಮೋದಿಗೆ ತೀವ್ರ ಮುಖಭಂಗವಾಗಿದ್ದು, ಇನ್ಮುಂದೆಯಾದರೂ ಚುನಾಯಿತ ಸರಕಾರಗಳಲ್ಲಿ ಮಧ್ಯ ಪ್ರವೇಶಿಸುವುದನ್ನು ನಿಲ್ಲಿಸಿ ಪ್ರಜಾಪ್ರಭುತ್ವವನ್ನು ಗೌರವಿಸಲಿ ಎಂದು ಹೇಳಿದ್ದಾರೆ.
ಉತ್ತರಾಖಂಡ್ ಹೈಕೋರ್ಟ್ ತೀರ್ಪು ಮೋದಿ ಸರಕಾರಕ್ಕೆ ಮುಖಭಂಗವಾಗಿದೆ. ಚುನಾಯಿತ ಸರಕಾರಗಳಲ್ಲಿ ಮಧ್ಯಪ್ರವೇಶಿಸುವುದು ಬಿಟ್ಟು ಪ್ರಜಾಪ್ರಭುತ್ವಕ್ಕೆ ಗೌರವ ಕೊಡಲಿ ಎಂದು ಟ್ವೀಟ್ ಮಾಡಿದ್ದಾರೆ.
ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಸರಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಳ್ವಿಕೆ ಹೇರಿದ್ದ ಕೇಂದ್ರ ಸರಕಾರದ ಕ್ರಮವನ್ನು ರದ್ದುಗೊಳಿಸಿ ಏಪ್ರಿಲ್ 29 ರಂದು ಬಹುಮತ ಸಾಬೀತುಪಡಿಸುವಂತೆ ರಾವತ್ಗೆ ಹೈಕೋರ್ಟ್ ಆದೇಶಿಸಿದೆ.
ಕೇಂದ್ರ ಸರಕಾರ ಅನಗತ್ಯವಾಗಿ ಉತ್ತರಾಖಂಡ್ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಿ ಪ್ರಜಾಪ್ರಭುತ್ವದ ಕಾನೂನುಗಳನ್ನು ಗಾಳಿಗೆ ತೂರಿದೆ. ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಕೂಡಾ ತಪ್ಪೆಸಗಿದ್ದಾರೆ. ಆದ್ದರಿಂದ, ರಾಷ್ಟ್ರಪತಿ ಆಳ್ವಿಕೆ ವಜಾಗೊಳಿಸಲಾಗುತ್ತದೆ ಎಂದು ಉತ್ತರಾಖಂಡ್ ಹೈಕೋರ್ಟ್ ತೀರ್ಪಿನಲ್ಲಿ ತಿಳಿಸಿದೆ.