Webdunia - Bharat's app for daily news and videos

Install App

ಪ್ರಧಾನಿ ಮೋದಿಗೆ ಸಮಸ್ಯೆ ಪರಿಹರಿಸಲಾಗದಿದ್ರೆ ಕಾಂಗ್ರೆಸ್ ಮೊರೆ ಹೋಗಲಿ: ರಾಹುಲ್ ಗಾಂಧಿ

Webdunia
ಬುಧವಾರ, 4 ಅಕ್ಟೋಬರ್ 2017 (20:09 IST)
ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
 ಅಮೇಥಿ ಲೋಕಸಭಾ ಕ್ಷೇತ್ರದ ಸಂಸದರಾಗಿರುವ ರಾಹುಲ್ ಗಾಂಧಿ, ಒಂದು ವೇಳೆ ರೈತರ ಮತ್ತು ಯುವಕರ ಸಮಸ್ಯೆಗಳನ್ನು ಪರಿಹರಿಸಲು ಪ್ರಧಾನಿ ಮೋದಿಗೆ ಸಾಧ್ಯವಾಗದಿದ್ದಲ್ಲಿ ಅದನ್ನು ಬಹಿರಂಗವಾಗಿ ಹೇಳಲಿ. ಕಾಂಗ್ರೆಸ್ ಪಕ್ಷ ಕೇವಲ ಆರು ತಿಂಗಳುಗಳಲ್ಲಿ ಸಮಸ್ಯೆಗಳನ್ನು ಪರಿಹರಿಸಲು ಸಿದ್ದವಿದೆ ಎಂದು ತಿರುಗೇಟು ನೀಡಿದ್ದಾರೆ.
 
ಯುಪಿಎ ಸರಕಾರ ಜಾರಿಗೆ ತಂದ ನರೇಗಾ ಯೋಜನೆಯನ್ನು ಪ್ರಧಾನಿ ಮೋದಿ ವಿರೋದಿಸಿದ್ದರು. ಅದೊಂದು ಅಪ್ರಯೋಜಕ ಯೋಜನೆ ಎಂದು ಟೀಕಿಸಿದ್ದರು. ಕೆಲ ತಿಂಗಳುಗಳ ನಂತರ ನರೇಗಾ ಯೋಜನೆ ಅತ್ಯುಪಯುಕ್ತ ಎಂದು ಹೇಳುತ್ತಿದ್ದಾರೆಂದು ಲೇವಡಿ ಮಾಡಿದರು.
 
ರಾಹುಲ್ ಗಾಂಧಿಯವರು ಯಾವುದೇ ವಿಷಯದ ಬಗ್ಗೆ ಪಾಲ್ಗೊಳ್ಳುವವರ ಅಭಿಪ್ರಾಯವನ್ನು ಪರಿಗಣಿಸದೆ ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಆರೋಪಿಸಿದ್ದಾರೆ. ಅವರು ಹೇಳಿದರು, "ಕಾಂಗ್ರೆಸ್ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೊದಲು ಜನರು ಸಲಹೆ, ಆದರೆ ಬಿಜೆಪಿ ತನ್ನದೇ ಆದ ಕೆಲಸ."
 
ಕಾಂಗ್ರೆಸ್ ನೇತೃತ್ವದ ಸರಕಾರ ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮುನ್ನ ಜನತೆಯ ಅಭಿಪ್ರಾಯಪಡೆದು ನಂತರ ತೀರ್ಮಾನ ತೆಗೆದುಕೊಳ್ಳುತ್ತಿತ್ತು. ಆದರೆ, ಬಿಜೆಪಿ ಯಾವುದೇ ಸಮಸ್ಯೆಯ ಬಗ್ಗೆ ತನ್ನದೇ ಆದ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಕಿಡಿಕಾರಿದರು.
 
ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಅಮೇಥಿ ಲೋಕಸಭಾ ಕ್ಷೇತ್ರದಲ್ಲಿ ಮೂರು ದಿನಗಳ ಪ್ರವಾಸ ಹಮ್ಮಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments