ಹತ್ಯೆಯಾದ ಕಾರ್ಯಕರ್ತನ ನೆನೆದು ಭಾವುಕರಾಗಿ, ಕೆಲ ಕ್ಷಣ ಭಾಷಣ ನಿಲ್ಲಿಸಿದ ಮೋದಿ

Sampriya
ಮಂಗಳವಾರ, 19 ಮಾರ್ಚ್ 2024 (18:32 IST)
Photo Courtesy X
ಸೇಲಂ: ನಡೆದ ರ್ಯಾಲಿಯಲ್ಲಿ 2013ರಲ್ಲಿ ಹತ್ಯೆಯಾದ ಬಿಜೆಪಿ ಕಾರ್ಯಕರ್ತನನ್ನು ನೆನೆದು ಪ್ರಧಾನಿ ನರೇಂದ್ರ ಮೋದಿ ಅವರು ಕೆಲ ಕ್ಷಣ ಭಾವುಕರಾಗಿ ಭಾಷಣವನ್ನು ನಿಲ್ಲಿಸಿದರು. ಈ ವೇಳೆ  ಮೋದಿ ಮೋದಿ ಎಂದು ಘೋಷಣೆಯನ್ನು ಜನರಿಂದ ಮೊಳಗಿತು.
 
ಲೋಕಸಭೆ ಚುನಾವಣೆಯ ಪೂರ್ವಭಾವಿಯಾಗಿ ತಮಿಳುನಾಡಿನ ಸೇಲಂನಲ್ಲಿ ಇಂದು ನಡೆದ ಸಾರ್ವಜನಿಕ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದಿವಂಗತ ಬಿಜೆಪಿ ನಾಯಕ ಕೆಎನ್ ಲಕ್ಷ್ಮಣನ್ ಸೇರಿದಂತೆ ಜಿಲ್ಲೆಗೆ ಸಂಬಂಧಿಸಿದ ಮೂವರು ವ್ಯಕ್ತಿಗಳನ್ನು ಸ್ಮರಿಸಿದರು.
 
ಈ ವೇಳೆ ಆಡಿಟರ್ ರಮೇಶ್ ಬಗ್ಗೆ ಮಾತನಾಡುವಾಗ ಕೆಲ ಕ್ಷಣ ಭಾವುಕರಾದರು.
 
"ಇಂದು, ನಾನು ಆಡಿಟರ್ ರಮೇಶ್ ಅವರನ್ನು ನೆನಪಿಸಿಕೊಳ್ಳುತ್ತೇನೆ" ಎಂದು ಪ್ರಧಾನಿ ಮೋದಿ ಒಂದು ನಿಮಿಷಕ್ಕೂ ಹೆಚ್ಚು ಕಾಲ ತಮ್ಮ ಭಾಷಣವನ್ನು ವಿರಾಮಗೊಳಿಸಿದರು. ಕೆಲವು ಸೆಕೆಂಡ್‌ಗಳ ಕಾಲ ಮೌನಕ್ಕೆ ಶರಣಾದ ಪ್ರೇಕ್ಷಕರು ನಂತರ ಮೋದಿಯವರನ್ನು ಬೆಂಬಲಿಸಿ ಘೋಷಣೆಗಳನ್ನು ಕೂಗಿದರು.
 
ತಮ್ಮ ಭಾಷಣವನ್ನು ಪುನರಾರಂಭಿಸಿದ ಪ್ರಧಾನಿ ಮೋದಿ, "ದುರದೃಷ್ಟವಶಾತ್  ರಮೇಶ್ ನಮ್ಮ ನಡುವೆ ಇಲ್ಲ" ಎಂದು ಹೇಳಿದರು.
 
ಉತ್ತಮ ವಾಗ್ಮಿಯಾಗಿದ್ದ ರಮೇಶ್ ಅವರು ಪಕ್ಷಕ್ಕಾಗಿ ಹಗಲಿರುಳು ಶ್ರಮಿಸಿದರು. ದುಷ್ಕರ್ಮಿಗಳಿಂದ ಅವರು ಕೊಲ್ಲಲ್ಪಟ್ಟರು ಎಂದು ಅವರು ದಿವಂಗತ ಬಿಜೆಪಿ ನಾಯಕನಿಗೆ ಈ ವೇಳೆ ಶ್ರದ್ಧಾಂಜಲಿ ಸಲ್ಲಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೃಹಲಕ್ಷ್ಮಿ ಯೋಜನೆಯಲ್ಲೂ ಹಗರಣವೇ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ತಪ್ಪು ಲೆಕ್ಕ ಕೊಟ್ಟ ಆರೋಪ

ಬಗರ್ ಹುಕುಂ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿದರೆ ಶಿಕ್ಷೆ: ಸಚಿವ ಕೃಷ್ಣಭೈರೇಗೌಡ

ಡಿಕೆ ಶಿವಕುಮಾರ್, ವಿಜಯೇಂದ್ರ ಬಗ್ಗೆ ಬೆಚ್ಚಿಬೀಳುವ ಬಾಂಬ್ ಸಿಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

ಬ್ರೇಕ್ ಫಾಸ್ಟ್, ಡಿನ್ನರ್ ಮೀಟಿಂಗ್ ನಿಂದಲೇ ರಾಜ್ಯ ಕುಲಗೆಟ್ಟಿದೆ: ಬಿವೈ ವಿಜಯೇಂದ್ರ

ವೋಟ್ ಚೋರಿ ಚರಿತ್ರೆಯನ್ನೇ ಹೊಂದಿರುವ ಕಾಂಗ್ರೆಸ್ ಗೆ ಬಿಜೆಪಿ ಮೇಲೆ ಆರೋಪಿಸಲು ನೈತಿಕತೆಯಿಲ್ಲ: ಸಿಟಿ ರವಿ

ಮುಂದಿನ ಸುದ್ದಿ
Show comments