Webdunia - Bharat's app for daily news and videos

Install App

ಕಲಾಂ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಳ್ಳಲಿರುವ ಪ್ರಧಾನಿ

Webdunia
ಬುಧವಾರ, 29 ಜುಲೈ 2015 (17:15 IST)
ನಾಳೆ ಮಧ್ಯಾಹ್ನ ರಾಮೇಶ್ವರಂನಲ್ಲಿ ನಡೆಯಲಿರುವ ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಅವರ ಅಂತ್ಯಸಂಸ್ಕಾರದಲ್ಲಿ ಪ್ರಧಾನಿ ಮೋದಿ ಪಾಲ್ಗೊಳ್ಳಲಿದ್ದಾರೆ. ನಾಳೆ 9.30 ರ ಸುಮಾರಿಗೆ ಅವರು ವಿಶೇಷ ವಿಮಾನದ ಮೂಲಕ ಮಧುರೈ ತಲುಪಲಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್ ಮೂಲಕ  ರಾಮೇಶ್ವರಂಗೆ ಪ್ರಯಾಣ ಬೆಳೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಭದ್ರತಾಧಿಕಾರಿಗಳು ನೀಡಿರುವ ಎಚ್ಚರಿಕೆಯ ಹೊರತಾಗಿಯೂ ಮೋದಿಯವರು ತಮ್ಮ ಪ್ರಯಾಣಕ್ಕೆ ಸಿದ್ಧತೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 
 
ಮೋದಿಯವರ ಆಗಮನವನ್ನು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ವೆಂಕಯ್ಯ ನಾಯ್ಡು  ಸ್ಪಷ್ಟ ಪಡಿಸಿದ್ದಾರೆ. 
 
ಕೆಲ ರಾಜ್ಯಗಳ ಮುಖ್ಯಮಂತ್ರಿಗಳು ಸಹ ಈ ಕಲಾಂ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ನಾಯ್ಡು ಹೇಳಿದ್ದಾರೆ. 
 
ಭಾರತದ ಅತ್ಯುನ್ನತ ನಾಗರಿಕ ಗೌರವ ಭಾರತ ರತ್ನದಿಂದ ಸನ್ಮಾನಿತರಾಗಿದ್ದ, ಕಲಾಂ ನಿಧನಕ್ಕೆ ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದ ಮೋದಿ  ತಮ್ಮ ಬ್ಲಾಗ್‌ನಲ್ಲಿ "ಭಾರತ ತನ್ನ ರತ್ನವನ್ನು ಕಳೆದುಕೊಂಡಿದೆ", ಎಂದು ಉದ್ಘರಿಸಿದ್ದರು.
 
"ನಮ್ಮ ವಿಜ್ಞಾನಿ-ರಾಷ್ಟ್ರಪತಿ -  ಜನಸಾಮಾನ್ಯರ ಪ್ರಾಮಾಣಿಕ ಪ್ರೀತಿಯನ್ನು, ಮೆಚ್ಚುಗೆಯನ್ನು ಪಡೆದುಕೊಂಡಿದ್ದರು. ವಸ್ತು ಆಸ್ತಿ ಮೂಲಕ ಯಶಸ್ಸನ್ನು ಅವರೆಂದೂ  ಅಳೆಯಲಿಲ್ಲ", ಎಂದು ಪ್ರಧಾನಿ ,ಕಲಾಂ ಅವರನ್ನು ನೆನಪಿಸಿಕೊಂಡಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments