Webdunia - Bharat's app for daily news and videos

Install App

ಸಿಎಂ ಕೆಸಿಆರ್‌ಗೆ ಮೋದಿ ಟಾಂಗ್!

Webdunia
ಶುಕ್ರವಾರ, 27 ಮೇ 2022 (10:09 IST)
ಹೈದರಾಬಾದ್ : ತೆಲಂಗಾಣ ರಾಜಧಾನಿಗೆ ಆಗಮಿಸುತ್ತಿದ್ದರೂ ತಮ್ಮನ್ನು ಸ್ವಾಗತಿಸದೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಭೇಟಿಗಾಗಿ ಬೆಂಗಳೂರಿಗೆ ತೆರಳಿದ ಮುಖ್ಯಮಂತ್ರಿ ಕೆ.ಚಂದ್ರಶೇಖರರಾವ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಟಾಂಗ್ ನೀಡಿದ್ದಾರೆ.
 
ಕುಟುಂಬಗಳು ನಡೆಸುವ ಪಕ್ಷಗಳು ಯಾವಾಗಲೂ ತಮ್ಮ ಪ್ರಗತಿಯ ಬಗ್ಗೆ ಮಾತ್ರವೇ ಯೋಚಿಸುತ್ತಿರುತ್ತವೆ. ಹೀಗಾಗಿ ಅಂತಹ ಪಕ್ಷಗಳು ದೇಶದ ಅತಿದೊಡ್ಡ ಶತ್ರುಗಳು ಎಂದು ಹರಿಹಾಯ್ದಿದ್ದಾರೆ.

ಬೇಗಂಪೇಟ್ ವಿಮಾನ ನಿಲ್ದಾಣದಲ್ಲಿ ಗುರುವಾರ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರನ್ನು ಉದ್ದೇಶಿಸಿ ಮಾತನಾಡಿದ ಅವರು, ಪರಿವಾರವಾದಿ ಪಕ್ಷಗಳು ರಾಜಕೀಯಕ್ಕಷ್ಟೇ ಸಮಸ್ಯೆ ಅಲ್ಲ. ಈ ದೇಶದ ಪ್ರಜಾಪ್ರಭುತ್ವ ಹಾಗೂ ಯುವಶಕ್ತಿಗೂ ಅಪಾಯಕಾರಿ.

ಕುಟುಂಬಗಳು ಮುನ್ನಡೆಸುವ ಪಕ್ಷಗಳು ಯಾವ ರೀತಿ ತಮ್ಮ ಅನುಕೂಲಕ್ಕೆ ಕಾಳಜಿ ವಹಿಸುತ್ತಿವೆ ಎಂಬುದನ್ನು ತೆಲಂಗಾಣದ ಜನತೆ ನೋಡುತ್ತಿದ್ದಾರೆ. ಈ ಪಕ್ಷಗಳು ಬಡ ಜನರ ಸಮಸ್ಯೆಗಳ ಬಗ್ಗೆ ಎಂದಿಗೂ ಚಿಂತೆ ಪಡುವುದಿಲ್ಲ. ಕುಟುಂಬಕ್ಕೆ ಸಮರ್ಪಿತವಾದ ಪಕ್ಷಗಳಿಗೆ ಭ್ರಷ್ಟಾಚಾರ ಎಂಬುದು ಹೇಗೆ ಮುಖವಾಗಿದೆ ಎಂಬುದನ್ನು ಈ ದೇಶ ನೋಡಿದೆ ಎಂದು ಚಾಟಿ ಬೀಸಿದರು.

ಪ್ರತ್ಯೇಕ ತೆಲಂಗಾಣ ರಾಜ್ಯ ಪರ ದಶಕಗಳ ಕಾಲ ನಡೆದ ಹೋರಾಟ ನಡೆದಿತ್ತು. ಉಜ್ವಲ ಭವಿಷ್ಯಕ್ಕಾಗಿ ಸಹಸ್ರಾರು ಮಂದಿ ಪ್ರಾಣಾರ್ಪಣೆ ಮಾಡಿದರು. ಆ ಪ್ರತಿಭಟನೆ ನಡೆಸಿದ್ದು ತೆಲಂಗಾಣ ಅಭಿವೃದ್ಧಿಯ ಕನಸನ್ನು ಧ್ವಂಸಗೊಳಿಸುವ ಒಂದು ಕುಟುಂಬದ ಪರವಾಗಿ ಅಲ್ಲ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಬಿಜೆಪಿ ಗೂಂಡಾಗಳೇ ಕಾರಣ: ಕಾಂಗ್ರೆಸ್ ನಾಯಕ ಎಂ ಲಕ್ಷ್ಮಣ್

Viral Video, ಬೆಂಗಳೂರು ಮಹಿಳೆಗೆ ಕಪಾಳಮೋಕ್ಷ ಮಾಡಿದ ರಾಪಿಡೋ ಚಾಲಕ: ಕಾರಣ ಇಲ್ಲಿದೆ

ದೆಹಲಿಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ಹಾಂಗ್‌ಕಾಂಗ್‌ನಲ್ಲಿ ಲ್ಯಾಂಡಿಂಗ್‌

ರಾಜ ರಘುವಂಶಿ ಹತ್ಯೆಯಾಗುವ ಮುನ್ನ ಪತ್ನಿ ಸೋನಂ ಜೊತೆಗಿದ್ದ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments