Webdunia - Bharat's app for daily news and videos

Install App

ದಲಿತರನ್ನು ಓಲೈಸಲು ಮೋದಿ ಯತ್ನ

Webdunia
ಬುಧವಾರ, 3 ಫೆಬ್ರವರಿ 2016 (16:54 IST)
ತಮಿಳುನಾಡಿನಲ್ಲಿ ನಿನ್ನೆ ಚುನಾವಣಾ ಪೂರ್ವ ಪ್ರಚಾರವನ್ನು ಆರಂಭಿಸಿದ್ದ ಪ್ರಧಾನಿ ಮೋದಿ ಎಲ್ಲಿಯವರೆಗೆ ಅಂಬೇಡ್ಕರ್‌ ಅವರ ಹೆಸರು ಇರುತ್ತದೋ ಅಲ್ಲಿಯವರೆಗೆ ದಲಿತರಿಗೆ ಮೀಸಲಾತಿ ಮುಂದುವರಿಯಲಿದೆ’ ಎಂದು ಹೇಳುವ ಮೂಲಕ ದಲಿತರನ್ನು  ಓಲೈಸಲು ಪ್ರಯತ್ನಿಸಿದ್ದಾರೆ.

 
ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಕೊಯಿಮತ್ತೂರಿನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಪ್ರಧಾನಿ, ಅಂಬೇಡ್ಕರ್ ಅವರ ನೆನಪಿಗಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದರಿಂದ ಹಲವು ಪಕ್ಷಗಳು ಭಯಗೊಂಡಿವೆ. ತಮ್ಮ ಆಸ್ತಿ ಎಂದುಕೊಂಡಿದ್ದ ದಲಿತರ ಮತಗಳು ತಮ್ಮ ಆಸ್ತಿ ಎಂದುಕೊಂಡಿದ್ದವು. ಬಿಜೆಪಿ ಅಂಬೇಡ್ಕರ್ ಅವರನ್ನು ಹೊಗಳುತ್ತಿದ್ದಂತೆ ಅವರು ಮೋದಿ ಸರ್ಕಾರ ದಲಿತ ಮತ್ತು ದೀನರ ವಿರುದ್ಧ ಎಂದು ಸುಳ್ಳು ಪ್ರಚಾರವನ್ನು ಪ್ರಾರಂಭಿಸಿದರು. ದಲಿತ ಮೀಸಲಾತಿ ರದ್ದುಪಡಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.
 
ಹೈದರಾಬಾದ್ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲ ಆತ್ಮಹತ್ಯೆ ಬಳಿಕ ದಲಿತರನ್ನು ತುಳಿಯಲಾಗುತ್ತಿದೆ ಎಂಬ ಆಕ್ರೋಶಯುಕ್ತ ಚರ್ಚೆಗಳು ಹೆಚ್ಚಿರುವುದರ ಹಿನ್ನೆಲೆಯಲ್ಲಿ ಸಹ ಮೋದಿಯವರು ತಮ್ಮ ಸರ್ಕಾರ ದಲಿತರ ವಿರೋಧಿಯಲ್ಲ ಎಂಬುದನ್ನು ಒತ್ತಿ ಹೇಳಲು ಪ್ರಯತ್ನಿಸಿದ್ದಾರೆ. 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments