Webdunia - Bharat's app for daily news and videos

Install App

ರಾಷ್ಟ್ರಪತಿ ದ್ರೌಪದಿ ಮುರ್ಮುರಿಂದ ಅರ್ಜುನ ಪ್ರಶಸ್ತಿ ಸ್ವೀಕರಿಸಿದ ಮೊಹಮ್ಮದ್ ಶಮಿ

Krishnaveni K
ಮಂಗಳವಾರ, 9 ಜನವರಿ 2024 (12:19 IST)
Photo Courtesy: Twitter
ನವದೆಹಲಿ: ಏಕದಿನ ವಿಶ್ವಕಪ್ ಹೀರೋ, ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿಗೆ ಪ್ರತಿಷ್ಠಿತ ಅರ್ಜುನ ಅವಾರ್ಡ್ಸ್ ನೀಡಿ ಗೌರವಿಸಲಾಗಿದೆ.

ರಾಷ್ಟ್ರಪತಿ ಭವನದಲ್ಲಿ ನಡೆದ ಕ್ರೀಡಾ ಪ್ರಶಸ್ತಿ ವಿತರಣೆ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಟೀಂ ಇಂಡಿಯಾ ಸ್ಟಾರ್ ವೇಗಿಗೆ ಪ್ರತಿಷ್ಠಿತ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಬಾರಿ ಏಕದಿನ ವಿಶ್ವಕಪ್ ನಲ್ಲಿ ಗರಿಷ್ಠ ವಿಕೆಟ್ ಟೇಕರ್ ಆಗಿದ್ದ ಮೊಹಮ್ಮದ್ ಶಮಿ ತಮ್ಮ ಕ್ರಿಕೆಟ್ ವೃತ್ತಿ ಜೀವನದ ಸಾಧನೆಗಾಗಿ ಈ ಪ್ರಶಸ್ತಿ ಪಡೆದಿದ್ದಾರೆ. ಅವರ ಪ್ರಶಸ್ತಿಯನ್ನು ಕೊನೆಯ ಗಳಿಗೆಯಲ್ಲಿ ಬಿಸಿಸಿಐ ಮನವಿ ಮೇರೆಗೆ ಸೇರಿಸಲಾಗಿತ್ತು.

ಭಾರತದಲ್ಲಿ ಕ್ರೀಡೆಗಾಗಿ ನೀಡಲಾಗುವ ಎರಡನೇ ಗರಿಷ್ಠ ಉನ್ನತ ಪ್ರಶಸ್ತಿ ಇದಾಗಿದೆ. 2021 ರಲ್ಲಿ ಶಿಖರ್ ಧವನ್ ಕೊನೆಯ ಬಾರಿಗೆ ಕ್ರಿಕೆಟ್ ಕ್ಷೇತ್ರದಿಂದ ಅರ್ಜುನ ಪ್ರಶಸ್ತಿಗೆ ಭಾಜನರಾಗಿದ್ದರು. ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾತನಾಡಿದ ಶಮಿ ಈ ಪ್ರಶಸ್ತಿ ನನ್ನ ಕನಸಾಗಿತ್ತು. ಎಷ್ಟೋ ಜನರಿಗೆ ಈ ಪ್ರಶಸ್ತಿ ಕನಸಾಗಿಯೇ ಉಳಿದಿರುತ್ತದೆ. ಆದರೆ ನನಗೆ ಸ್ವೀಕರಿಸಲು ಸಾ‍ಧ್ಯವಾಗಿದ್ದು ಹೆಮ್ಮೆ ಎನಿಸುತ್ತಿದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

Rajasthan: ಹುಲಿ ದಾಳಿಗೆ ಮೂರನೇ ಬಲಿ, ದೇವಾಲಯದ ಉಸ್ತುವಾರಿ ಸಾವು

ಆತುರ, ಕ್ರೆಡಿಟ್ ವಾರ್ ಗೆ 11 ಅಮಾಯಕರ ಬಲಿಯಾದ್ರು: ಸಿ.ಟಿ.ರವಿ

Tiger Attack: ಕೇರಳದಂತೆ ಚಾಮರಾಜನಗರದಲ್ಲೂ ನಡೆಯಿತು ದುರ್ಘಟನೆ

Rajastan: ಜೈಪುರದಿಂದ ಪ್ರವಾಸಕ್ಕೆ ಬಂದಿದ್ದ ಎಂಟು ಯುವಕರು ಬನಾಸ್‌ ನದಿಯಲ್ಲಿ ಮುಳುಗಿ ದಾರುಣ ಸಾವು

ಮುಂದಿನ ಸುದ್ದಿ
Show comments