Webdunia - Bharat's app for daily news and videos

Install App

ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರ ಖಾತೆಗೆ ಹಾಕಲಾದ ಹಣ ವಾಪಾಸ್; ಸ್ಪೋಟಕ ಮಾಹಿತಿ ಬಹಿರಂಗ

Webdunia
ಶುಕ್ರವಾರ, 3 ಮೇ 2019 (09:40 IST)
ನವದೆಹಲಿ : ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರ ಬ್ಯಾಂಕ್ ಖಾತೆಗೆ ಹಾಕಿದ ಹಣ ಕೆಲವೇ ಗಂಟೆಗಳಲ್ಲಿ ಹಿಂಪಡೆಯಲಾಗಿದೆ ಎಂಬ ಮಾಹಿತಿ ಇದೀಗ ಬಯಲಾಗಿದೆ.



ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರ ಬ್ಯಾಂಕ್ ಖಾತೆಗೆ ಪ್ರತಿ ವರ್ಷ 6,000 ರೂ ಗಳನ್ನು ತಲಾ 2000 ರೂ.ನಂತೆ 3 ಕಂತುಗಳಲ್ಲಿ ರೈತರ ಖಾತೆಗೆ ಹಣವನ್ನು ಜಮಾ ಮಾಡಲಾಗುವುದು ಎಂದು ತಿಳಿಸಿದ್ದರು. ಅದರಂತೆ ಯೋಜನೆಯ ಮೊದಲ ಕಂತಿನ ರೂಪದಲ್ಲಿ ರೈತರ ಬ್ಯಾಂಕ್ ಖಾತೆಗೆ 2000 ರೂ ಹಾಕಲಾಗಿತ್ತು. ಆದರೆ ಹಾಕಿದ ಕೆಲವೇ ದಿನಗಳಲ್ಲಿ ಹಣ ವಾಪಸ್ ಪಡೆದುಕೊಳ್ಳಲಾಗಿದೆ ಎಂದು ರೈತರು ಆರೋಪಿಸಿದ್ದು, ಮಾಹಿತಿ ಹಕ್ಕು ಕಾಯ್ದೆಯಡಿ ಆನ್ ಲೈನ್ ಸುದ್ದಿ ಜಾಲ ತಾಣ 'ದಿ ವೈರ್' ಪಡೆದ ಮಾಹಿತಿಯಲ್ಲಿ  ಈ ವಿಚಾರ ಬಹಿರಂಗವಾಗಿದೆ.


ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಸಿಂಡಿಕೇಟ್ ಬ್ಯಾಂಕ್, ಕೆನರಾ ಬ್ಯಾಂಕ್ ಸೇರಿದಂತೆ ಅನೇಕ ರಾಷ್ಟ್ರೀಕೃತ ಬ್ಯಾಂಕ್ ಗಳು ಈ ಯೋಜನೆಯಡಿ ಅನೇಕ ಫಲಾನುಭವಿಗಳ ಖಾತೆಗೆ ಹಾಕಲಾಗಿದ್ದ ಹಣವನ್ನು ಕಡಿತ ಮಾಡಲಾಗಿದೆ ಎಂದು ತಿಳಿಸಿವೆ.  ಆದರೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ಸುಮಾರು 3 ಕೋಟಿ ರೈತರ ಖಾತೆಗಳಿಗೆ ಹಣ ಜಮಾ ಮಾಡಲಾಗಿದೆ. ಹಣ ವಾಪಸ್ ಪಡೆದ ಬಗ್ಗೆ ಮಾಹಿತಿ ಇಲ್ಲ ಎಂದು ಕೃಷಿ ಸಚಿವಾಲಯ ಹೇಳಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮತಗಳ್ಳತನ ಆರೋಪದ ಬೆನ್ನಲ್ಲೇ ಪತ್ರಿಕಾಗೋಷ್ಠಿ ಕರೆದ ಚುನಾವಣಾ ಆಯೋಗ

ಧರ್ಮಸ್ಥಳ ಎಸ್ಐಟಿ ತನಿಖೆಯಲ್ಲಿ ಮಹತ್ವದ ನಿರ್ಧಾರ

ಧರ್ಮಸ್ಥಳ ವಿಚಾರದಲ್ಲಿ ಕ್ಷಮೆ ಕೇಳಿ ಸಿಎಂ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ದೇಶದಲ್ಲಿ ನಾನೇ ನಂ 1 ಗೃಹಸಚಿವ, ಹೇಳ್ಕೊಳ್ಳೋರು ಹೇಳ್ಕೊಳ್ಳಿ: ಡಾ ಜಿ ಪರಮೇಶ್ವರ್

ಬೆಳಗಾವಿಯಿಂದ ಮುಂಬೈಗೆ ಹೊರಟಿದ್ದ ವಿಮಾನದಲ್ಲಿ ತಾಂತ್ರಿಕ ದೋಷ, ಪೈಲೆಟ್‌ ಸಮಯ ಪ್ರಜ್ಞೆ ತಪ್ಪಿಸಿತು ದೊಡ್ಡ ದುರಂತ

ಮುಂದಿನ ಸುದ್ದಿ
Show comments