Select Your Language

Notifications

webdunia
webdunia
webdunia
webdunia

ಅಕ್ರಮ ಹಣ ವರ್ಗಾವಣೆ ಆರೋಪ: ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪುತ್ರಿ ವಿರುದ್ಧ ದೂರು

ಅಕ್ರಮ ಹಣ ವರ್ಗಾವಣೆ ಆರೋಪ: ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪುತ್ರಿ ವಿರುದ್ಧ ದೂರು

Sampriya

ಕೊಚ್ಚಿ , ಬುಧವಾರ, 27 ಮಾರ್ಚ್ 2024 (17:03 IST)
Photo Courtesy X
ಕೊಚ್ಚಿ:  ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ  ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪುತ್ರಿ ವೀಣಾ ವಿಜಯನ್, ಅವರಿಗೆ ಸೇರಿದ ಐಟಿ ಕಂಪನಿ ಹಾಗೂ ಇತರರ ವಿರುದ್ಧ ಜಾರಿ ನಿರ್ದೇಶನಾಲಯವು  ದೂರು ದಾಖಲಿಸಿದೆ ಎಂದು ತಿಳಿದುಬಂದಿದೆ.

ಖಾಸಗಿ ಖನಿಜ ಸಂಸ್ಥೆಯಿಂದ ಅಕ್ರಮವಾಗಿ ಹಣ ಪಡೆದ ಆರೋಪದಲ್ಲಿ ತನಿಖಾ ಸಂಸ್ಥೆಯು ಪ್ರಕರಣ ದಾಖಲಿಸಿಕೊಂಡಿದೆ. ಇದರಲ್ಲಿ ಭಾಗಿಯಾಗಿರುವವರಿಗೆ ಸಮನ್ಸ್ ಜಾರಿಗೊಳಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಕೇಂದ್ರ ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯದ ಗಂಭೀರ ವಂಚನೆ ಪ್ರಕರಣಗಳ ತನಿಖಾ ವಿಭಾಗ (ಎಸ್‌ಎಫ್‌ಐಒ) ಸಲ್ಲಿಸಿದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡಿದೆ.

2018 19ರ ಅವಧಿಯಲ್ಲಿ ಕೊಚ್ಚಿನ್ ಮಿನರಲ್ಸ್‌ ಹಾಗೂ ರುಟೈಲ್ ಲಿಮಿಟೆಡ್‌ ಎನ್ನುವ ಕಂಪನಿಗಳು ವೀಣಾ ಅವರ ಎಕ್ಸಲಾಜಿಕ್ ಸೆಲ್ಯೂಷನ್‌ನಿಂದ ಯಾವುದೇ ಸೇವೆ ಪಡೆಯದಿದ್ದರೂ ₹1.72 ಕೋಟಿ ಹಣವನ್ನು ಅಕ್ರಮವಾಗಿ ಪಾವತಿ ಮಾಡಿದೆ ಎಂದು ಆರೋಪಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಗನನ್ನು ಗೆಲ್ಲಿಸುವ ತಾಕತ್ತಿಲ್ಲದ ಕುಮಾರಸ್ವಾಮಿ ತಾನು ಗೆಲ್ಲಲು ಹೇಗೆ ಸಾಧ್ಯ? ಸಿಎಂ ಸಿದ್ದರಾಮಯ್ಯ