Webdunia - Bharat's app for daily news and videos

Install App

ಅಕ್ರಮ ಹಣ ವರ್ಗಾವಣೆ ಆರೋಪ: ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪುತ್ರಿ ವಿರುದ್ಧ ದೂರು

Sampriya
ಬುಧವಾರ, 27 ಮಾರ್ಚ್ 2024 (17:03 IST)
Photo Courtesy X
ಕೊಚ್ಚಿ:  ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ  ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪುತ್ರಿ ವೀಣಾ ವಿಜಯನ್, ಅವರಿಗೆ ಸೇರಿದ ಐಟಿ ಕಂಪನಿ ಹಾಗೂ ಇತರರ ವಿರುದ್ಧ ಜಾರಿ ನಿರ್ದೇಶನಾಲಯವು  ದೂರು ದಾಖಲಿಸಿದೆ ಎಂದು ತಿಳಿದುಬಂದಿದೆ.

ಖಾಸಗಿ ಖನಿಜ ಸಂಸ್ಥೆಯಿಂದ ಅಕ್ರಮವಾಗಿ ಹಣ ಪಡೆದ ಆರೋಪದಲ್ಲಿ ತನಿಖಾ ಸಂಸ್ಥೆಯು ಪ್ರಕರಣ ದಾಖಲಿಸಿಕೊಂಡಿದೆ. ಇದರಲ್ಲಿ ಭಾಗಿಯಾಗಿರುವವರಿಗೆ ಸಮನ್ಸ್ ಜಾರಿಗೊಳಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಕೇಂದ್ರ ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯದ ಗಂಭೀರ ವಂಚನೆ ಪ್ರಕರಣಗಳ ತನಿಖಾ ವಿಭಾಗ (ಎಸ್‌ಎಫ್‌ಐಒ) ಸಲ್ಲಿಸಿದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡಿದೆ.

2018 19ರ ಅವಧಿಯಲ್ಲಿ ಕೊಚ್ಚಿನ್ ಮಿನರಲ್ಸ್‌ ಹಾಗೂ ರುಟೈಲ್ ಲಿಮಿಟೆಡ್‌ ಎನ್ನುವ ಕಂಪನಿಗಳು ವೀಣಾ ಅವರ ಎಕ್ಸಲಾಜಿಕ್ ಸೆಲ್ಯೂಷನ್‌ನಿಂದ ಯಾವುದೇ ಸೇವೆ ಪಡೆಯದಿದ್ದರೂ ₹1.72 ಕೋಟಿ ಹಣವನ್ನು ಅಕ್ರಮವಾಗಿ ಪಾವತಿ ಮಾಡಿದೆ ಎಂದು ಆರೋಪಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments