Webdunia - Bharat's app for daily news and videos

Install App

16ನೇ ಜನಗಣತಿಗೆ ಮೂಹೂರ್ತ ಫಿಕ್ಸ್‌: ಜಾತಿಗಣತಿಗೂ ಗ್ರೀನ್‌ಸಿಗ್ನಲ್‌, ಎಷ್ಟು ಹಂತದಲ್ಲಿ ನಡೆಯುತ್ತೆ ಗೊತ್ತಾ

Sampriya
ಸೋಮವಾರ, 16 ಜೂನ್ 2025 (14:10 IST)
Photo Credit X
ನವದೆಹಲಿ: ದೇಶದಾದ್ಯಂತ 16ನೇ ಜನಗಣತಿಗೆ ದಿನಗಣನೆ ಆರಂಭವಾಗಿದೆ. ನರೇಂದ್ರ ಮೋದಿ ನಾಯಕತ್ವದ ಕೇಂದ್ರ ಸರ್ಕಾರವು ಜನಗಣತಿ ನಡೆಸುವ ಸಂಬಂಧ ಸೋಮವಾರ ಅಧಿಸೂಚನೆ ಹೊರಡಿಸಿದೆ. ಅದು ಮಹತ್ವದ ಅಂಶಗಳನ್ನು ಒಳಗೊಂಡಿದೆ.

ಭಾರತ ದೇಶದಲ್ಲಿ 16 ವರ್ಷಗಳ ನಂತರ ಜಾತಿ ಸೇರಿದಂತೆ ಇತರೆ ಪ್ರಮುಖ ಮಾಹಿತಿ ಕಲೆ ಹಾಕುವ ನಿಟ್ಟಿನಲ್ಲಿ ಜನಗಣತಿಗೆ ಸರ್ಕಾರ ಅಧಿಸೂಚನೆ ಹೊರಡಿಸಿದೆ. ದೇಶದಲ್ಲಿ 2011ರಲ್ಲಿ ಕೊನೆಯ ಬಾರಿಗೆ ಗಣತಿ ಕಾರ್ಯ ನಡೆದಿತ್ತು. ಜನಗಣತಿ ಪ್ರಕ್ರಿಯೆ ಪ್ರಾರಂಭವಾದಾಗಿನಿಂದ ಇದು 16ನೇ ಜನಗಣತಿಯಾಗಿದ್ದು, ಸ್ವಾತಂತ್ರ್ಯದ ನಂತರ ಎಂಟನೇ ಜನಗಣತಿಯಾಗಿದೆ ಎಂದು ಸರ್ಕಾರದ ಹೇಳಿಕೆ ತಿಳಿಸಿದೆ.

2026ರ ಅಕ್ಟೋಬರ್ 1ರಿಂದ ಲಡಾಖ್, ಜಮ್ಮು ಮತ್ತು ಕಾಶ್ಮೀರ, ಉತ್ತರಾಖಂದಂತಹ ಹಿಮ ಆವರಿಸುವ ಪ್ರದೇಶಗಳಲ್ಲಿ ಗಣತಿ ಕಾರ್ಯ ನಡೆಯಲಿದೆ. ದೇಶದ ಉಳಿದ ಭಾಗಗಳಲ್ಲಿ 2027ರ ಮಾರ್ಚ್‌ 1ರಿಂದ ಜನಗಣತಿಯನ್ನು ನಡೆಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ಈ ಬಾರಿ ಜನಗಣತಿಯೊಂದಿಗೆ ಜಾತಿ ಗಣತಿಯನ್ನೂ ಸಹ ಮಾಡಲಾಗುತ್ತದೆ. ‌‌ದೇಶದಾದ್ಯಂತ ಜನಸಂಖ್ಯಾ ಸಂಬಂಧಿತ ದತ್ತಾಂಶ ಕಲೆ ಹಾಕುವ ಬೃಹತ್ ಕಾರ್ಯವನ್ನು ಸುಮಾರು 34 ಲಕ್ಷ ಗಣತಿದಾರರು ಮತ್ತು ಮೇಲ್ವಿಚಾರಕರು, ಡಿಜಿಟಲ್ ಸಾಧನಗಳೊಂದಿಗೆ ಸಜ್ಜಿತವಾದ ಸುಮಾರು 1.3 ಲಕ್ಷ ಜನಗಣತಿ ಕಾರ್ಯಕರ್ತರು ಮಾಡಲಿದ್ದಾರೆ.

ಜನಗಣತಿಯನ್ನು ಎರಡು ಹಂತಗಳಲ್ಲಿ ನಡೆಸಲಾಗುವುದು. ಮೊದಲ ಹಂತದಲ್ಲಿ ಮನೆ ಪಟ್ಟಿ ಕಾರ್ಯಾಚರಣೆ (ಎಚ್‌ಎಲ್‌ಒ) ನಡೆಸಲಾಗುವುದು. ಇದರಲ್ಲಿ ಪ್ರತಿ ಮನೆಯ ಸ್ಥಿತಿ, ನಿವಾಸಿಯ ಆಸ್ತಿ ಮತ್ತು ಇತರ ಮಾಹಿತಿ ಸಂಗ್ರಹಿಸಲಾಗುತ್ತದೆ. ಎರಡನೇ ಹಂತದಲ್ಲಿ ಜನಸಂಖ್ಯಾ ಗಣತಿ (ಪಿಇ) ನಡೆಯುತ್ತದೆ. ಇದರಲ್ಲಿ ಮನೆಯ ಜನಸಂಖ್ಯೆ, ಪ್ರತಿಯೊಬ್ಬ ವ್ಯಕ್ತಿಯ ಸಾಮಾಜಿಕ-ಆರ್ಥಿಕ, ಸಾಂಸ್ಕೃತಿಕ ಮತ್ತು ಇತರ ವಿವರಗಳನ್ನು ಸಂಗ್ರಹಿಸಲಾಗುತ್ತದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments